ಸಂಸದ ಪ್ರತಾಪಸಿಂಹಗೆ ಮುಖಂಡ ಪ್ರದೀಪ್ಕುಮಾರ್ ಸಲಹೆ
ಮೈಸೂರು: ಟಿಪ್ಪು ರೈಲಿನ ಹೆಸರು ನಾನೇ ಬದಲಿಸಿದ್ದೇನೆ ಎನ್ನುವ ಅಹಂಕಾರದ ಮಾತುಗಳನ್ನು ಆಡುವುದು ಬಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಪ್ರದೀಪ್ಕುಮಾರ್ ಸಂಸದ ಪ್ರತಾಪಸಿಂಹ ಅವರಿಗೆ ಸಲಹೆ ನೀಡಿದ್ದಾರೆ.
ಬಾರ್ ಮುಂದೆ ನಿಂತು ಮಾತನಾಡುವವರ ರೀತಿಯಲ್ಲಿ ನೀವು ಮಾತನಾಡುತ್ತೀದ್ದೀರಿ. ಮೈಸೂರಿನ ಸಂಸದರಾದಿ ಎರಡು ಬಾರಿ ಆಕಸ್ಮಿಕವಾಗಿ ಆಯ್ಕೆಯಾದ ನಿಮ್ಮನ್ನು ಜನ ಸಹಿಸಿಕೊಂಡಿದ್ದಾರೆ. ನೀವು ಸಮಾಜಗಳ ನಡುವೆ ಅಶಾಂತಿ ಉಂಟು ಮಾಡುತ್ತಿರುವ ಹೇಳಿಕೆಯನ್ನು ಪ್ರತಿದಿನ ನೀಡುತ್ತಿದ್ದೀರಿ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದ ಮೈಸೂರಿನಲ್ಲಿ ಸಾಮರಸ್ಯ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಮೈಸೂರಿನ ಒಡೆಯರ್ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಅವರ ಹೆಸರನ್ನು ಒಂದು ರೈಲಿಗೆ ಸೀಮಿತ ಮಾಡುವ ಬದಲು ರೈಲ್ವೆ ನಿಲ್ದಾಣಕ್ಕೆ ಇಡುವಂತೆ ನೋಡಿಕೊಳ್ಳಿ. ಅದನ್ನು ಬಿಟ್ಟು ದಿನ ಬೆಳಗಾದರೆ ಟಿಪ್ಪು ಹೆಸರು ಪಠಿಸುತ್ತಾ ಜನರ ಭಾವನೆ ಕೆರಳಿಸುತ್ತೀದ್ದೀರಿ ಎಂದು ಟೀಕಿಸಿದ್ದಾರೆ.
ಮೈಸೂರು ಹೊರ ವರ್ತುಲ ರಸ್ತೆಗೆ ಎಲ್ಇಡಿ ದೀಪ ಹಾಕಿಸುವುದು ಸೇರಿ ಹಲವು ಅಭಿವೃದ್ದಿ ಚಟುವಟಿಕೆಗಳನ್ನು ಮಾಡುತ್ತೀದ್ದೀರಿ. ಅದನ್ನು ಸರಿಯಾಗಿ ಮಾಡಿ ಎಂದು ಪ್ರದೀಪ್ ಸಲಹೆ ನೀಡಿದ್ದಾರೆ.
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…