ಸಂಸದ ಪ್ರತಾಪಸಿಂಹಗೆ ಮುಖಂಡ ಪ್ರದೀಪ್ಕುಮಾರ್ ಸಲಹೆ
ಮೈಸೂರು: ಟಿಪ್ಪು ರೈಲಿನ ಹೆಸರು ನಾನೇ ಬದಲಿಸಿದ್ದೇನೆ ಎನ್ನುವ ಅಹಂಕಾರದ ಮಾತುಗಳನ್ನು ಆಡುವುದು ಬಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಪ್ರದೀಪ್ಕುಮಾರ್ ಸಂಸದ ಪ್ರತಾಪಸಿಂಹ ಅವರಿಗೆ ಸಲಹೆ ನೀಡಿದ್ದಾರೆ.
ಬಾರ್ ಮುಂದೆ ನಿಂತು ಮಾತನಾಡುವವರ ರೀತಿಯಲ್ಲಿ ನೀವು ಮಾತನಾಡುತ್ತೀದ್ದೀರಿ. ಮೈಸೂರಿನ ಸಂಸದರಾದಿ ಎರಡು ಬಾರಿ ಆಕಸ್ಮಿಕವಾಗಿ ಆಯ್ಕೆಯಾದ ನಿಮ್ಮನ್ನು ಜನ ಸಹಿಸಿಕೊಂಡಿದ್ದಾರೆ. ನೀವು ಸಮಾಜಗಳ ನಡುವೆ ಅಶಾಂತಿ ಉಂಟು ಮಾಡುತ್ತಿರುವ ಹೇಳಿಕೆಯನ್ನು ಪ್ರತಿದಿನ ನೀಡುತ್ತಿದ್ದೀರಿ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದ ಮೈಸೂರಿನಲ್ಲಿ ಸಾಮರಸ್ಯ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಮೈಸೂರಿನ ಒಡೆಯರ್ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಅವರ ಹೆಸರನ್ನು ಒಂದು ರೈಲಿಗೆ ಸೀಮಿತ ಮಾಡುವ ಬದಲು ರೈಲ್ವೆ ನಿಲ್ದಾಣಕ್ಕೆ ಇಡುವಂತೆ ನೋಡಿಕೊಳ್ಳಿ. ಅದನ್ನು ಬಿಟ್ಟು ದಿನ ಬೆಳಗಾದರೆ ಟಿಪ್ಪು ಹೆಸರು ಪಠಿಸುತ್ತಾ ಜನರ ಭಾವನೆ ಕೆರಳಿಸುತ್ತೀದ್ದೀರಿ ಎಂದು ಟೀಕಿಸಿದ್ದಾರೆ.
ಮೈಸೂರು ಹೊರ ವರ್ತುಲ ರಸ್ತೆಗೆ ಎಲ್ಇಡಿ ದೀಪ ಹಾಕಿಸುವುದು ಸೇರಿ ಹಲವು ಅಭಿವೃದ್ದಿ ಚಟುವಟಿಕೆಗಳನ್ನು ಮಾಡುತ್ತೀದ್ದೀರಿ. ಅದನ್ನು ಸರಿಯಾಗಿ ಮಾಡಿ ಎಂದು ಪ್ರದೀಪ್ ಸಲಹೆ ನೀಡಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…