ಜಿಲ್ಲೆಗಳು

ಸ್ಪೀಡ್ ಸ್ಕೇಟಿಂಗ್ ಮಂಡ್ಯದ ಕುವರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ ೧೧-೧೪ ವರ್ಷದೊಳಗಿನ ವಿಭಾಗದ ಸ್ಫರ್ಧೆಯಲ್ಲಿ ಮಂಡ್ಯ ನಗರದ ಸೈಂಟ್ ಥಾಮಸ್ ಇಂಗ್ಲಿಷ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಎಸ್.ಎಲ್. ಶಾರ್ವರಿ ೫೦೦ ಮೀ., ೧೦೦೦ ಮೀ. ಹಾಗೂ ೨೦೦೦ ಮೀ. ಮೂರೂ ಸ್ಫರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆಗೆ ಚಿನ್ಮಯ ಶಾಲೆಯ ದೈಹಿಕ ಶಿಕ್ಷಕರಾಗಿರುವ ಜಿ.ಎಚ್.ಶ್ರೀನಿವಾಸ್ ಅವರು ಮಾರ್ಗದರ್ಶನ ಮತ್ತು ತರಬೇತಿ ನೀಡಿರುತ್ತಾರೆ. ಶಾರ್ವರಿ ತಂದೆ ಮಂಡ್ಯ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹ ಬೋಧಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ತಾಯಿ ಕೆ.ಬಿ. ಲತಾ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರಿನ ಜ್ಞಾನವಾಹಿನಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

andolana

Recent Posts

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

5 mins ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

11 mins ago

Love in Mandya | ಮಗಳನ್ನ ಲವ್‌ ಮ್ಯಾರೇಜ್‌ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ…

16 mins ago

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

39 mins ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

59 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

1 hour ago