ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ನ ೧೧-೧೪ ವರ್ಷದೊಳಗಿನ ವಿಭಾಗದ ಸ್ಫರ್ಧೆಯಲ್ಲಿ ಮಂಡ್ಯ ನಗರದ ಸೈಂಟ್ ಥಾಮಸ್ ಇಂಗ್ಲಿಷ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಎಸ್.ಎಲ್. ಶಾರ್ವರಿ ೫೦೦ ಮೀ., ೧೦೦೦ ಮೀ. ಹಾಗೂ ೨೦೦೦ ಮೀ. ಮೂರೂ ಸ್ಫರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಕೆಗೆ ಚಿನ್ಮಯ ಶಾಲೆಯ ದೈಹಿಕ ಶಿಕ್ಷಕರಾಗಿರುವ ಜಿ.ಎಚ್.ಶ್ರೀನಿವಾಸ್ ಅವರು ಮಾರ್ಗದರ್ಶನ ಮತ್ತು ತರಬೇತಿ ನೀಡಿರುತ್ತಾರೆ. ಶಾರ್ವರಿ ತಂದೆ ಮಂಡ್ಯ ಪಿಇಎಸ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಸಹ ಬೋಧಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ತಾಯಿ ಕೆ.ಬಿ. ಲತಾ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರಿನ ಜ್ಞಾನವಾಹಿನಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…