ಜಿಲ್ಲೆಗಳು

ಸ್ಪೀಡ್ ಸ್ಕೇಟಿಂಗ್ : ಮಂಡ್ಯದ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾಳೆ.
ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ ೧೧-೧೪ ವರ್ಷದೊಳಗಿನ ವಿಭಾಗದ ಸ್ಫರ್ಧೆಯಲ್ಲಿ ಮಂಡ್ಯ ನಗರದ ಸೈಂಟ್ ಥಾಮಸ್ ಇಂಗ್ಲಿಷ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಎಸ್.ಎಲ್. ಶಾರ್ವರಿ ೫೦೦ ಮೀ., ೧೦೦೦ ಮೀ. ಹಾಗೂ ೨೦೦೦ ಮೀ. ಮೂರೂ ಸ್ಫರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಕೆಗೆ ಚಿನ್ಮಯ ಶಾಲೆಯ ದೈಹಿಕ ಶಿಕ್ಷಕರಾಗಿರುವ ಜಿ.ಎಚ್.ಶ್ರೀನಿವಾಸ್ ಅವರು ಮಾರ್ಗದರ್ಶನ ಮತ್ತು ತರಬೇತಿ ನೀಡಿರುತ್ತಾರೆ. ಶಾರ್ವರಿ ತಂದೆ ಮಂಡ್ಯ ಪಿಇಎಸ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಸಹ ಬೋಧಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ತಾಯಿ ಕೆ.ಬಿ. ಲತಾ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರಿನ ಜ್ಞಾನವಾಹಿನಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago