ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ನ ೧೧-೧೪ ವರ್ಷದೊಳಗಿನ ವಿಭಾಗದ ಸ್ಫರ್ಧೆಯಲ್ಲಿ ಮಂಡ್ಯ ನಗರದ ಸೈಂಟ್ ಥಾಮಸ್ ಇಂಗ್ಲಿಷ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಎಸ್.ಎಲ್. ಶಾರ್ವರಿ ೫೦೦ ಮೀ., ೧೦೦೦ ಮೀ. ಹಾಗೂ ೨೦೦೦ ಮೀ. ಮೂರೂ ಸ್ಫರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಕೆಗೆ ಚಿನ್ಮಯ ಶಾಲೆಯ ದೈಹಿಕ ಶಿಕ್ಷಕರಾಗಿರುವ ಜಿ.ಎಚ್.ಶ್ರೀನಿವಾಸ್ ಅವರು ಮಾರ್ಗದರ್ಶನ ಮತ್ತು ತರಬೇತಿ ನೀಡಿರುತ್ತಾರೆ. ಶಾರ್ವರಿ ತಂದೆ ಮಂಡ್ಯ ಪಿಇಎಸ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಸಹ ಬೋಧಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ತಾಯಿ ಕೆ.ಬಿ. ಲತಾ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರಿನ ಜ್ಞಾನವಾಹಿನಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…