ಜಿಲ್ಲೆಗಳು

ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯ: ಬಿ.ಎಂ. ಸವಿತಾ !

ಮೈಸೂರು: ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದ್ದು ಪ್ರತಿಯೊಬ್ಬ ಮಹಿಳೆಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಿಸಬೇಕೆಂದು ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಬಿ.ಎಂ. ಸವಿತಾ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಮಹಿಳಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮನೆ ಹಾಗೂ
ಕಚೇರಿಗಳಲ್ಲಿ ಎರಡು ಕಡೆಯು ಸಮನಾಗಿ ಕೆಲಸಮಾಡುತ್ತಾರೆ ಎಂದರು.

ಒತ್ತಡಗಳು ಇದ್ದೇ ಇರುತ್ತವೆ. ಒತ್ತಡಗಳನ್ನು ಮರೆಯಲು ಕ್ರೀಡೆ ಅನಿವಾರ್ಯವಾಗಿದ್ದು, ಗಂಡು ಮಕ್ಕಳಂತೆ ನಾವು ಸಹ ಸಾಧನೆ ಮಾಡಬಹುದು ಆದ್ದರಿಂದ
ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಡಾ|| ಕೃಷ್ಣಂರಾಜು ಮಾತನಾಡಿ ಹೆಣ್ಣು ಮಕ್ಕಳು ಸಹ ಆರೋಗ್ಯವಾಗಿರಬೇಕೆಂದು ಈ ಕ್ರೀಡಾ ಕೂಟವನ್ನು ಆಯೋಜನೆ ಮಾಡಲಾಗಿದ್ದು, ಯುರೋಪಿಯನ್ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಸಮಾನತೆ ಇದೆ. ಆದರೆ ಭಾರತದಲ್ಲಿ ಸಮಾನತೆ ಸಿಕ್ಕಿಲ್ಲದಿದ್ದರೂ ಸಹ ಮಹಿಳೆಯರು ಕೂಡ ಪುರುಷರಷ್ಟೇ ಬಲಾಡ್ಯರಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮದೇ ಆದ ಸಾಧನೆಯನ್ನುಮಾಡಿದ್ದಾರೆ ಎಂದರು.

ಕ್ರೀಡೆ ಮನಸ್ಸಿಗೆ ಉಲ್ಲಾಸವನ್ನು ಕೊಡುತ್ತದೆ. ನಾವು ಹೈಸ್ಕೂಲಿನಲ್ಲಿ ಓದುವಾಗ ಆಟವಾಡುವುದಕ್ಕೆ, ಬಿಡುವುದನ್ನೇ ಕಾಯುತ್ತಿದ್ದೆವು. ಕೆಲಸ ಮಾಡುವ ಮಹಿಳೆಯರೂ ಕೂಡ ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿಯೂ ಸಹ ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿರಿ. ಸೋಲು, ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ ಎಲ್ಲರಿಗೂ ಶುಭವಾಗಲಿ ಎಂದರು.

ಸಮಾರಂಭದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್‌ನಾಯಕ್ ಸ್ವಾಗತಿಸಿದರು. ಹಿರಿಯ ಭೂ ವಿಜ್ಞಾನಿ ಡಾ|| ಪುಷ್ಪವತಿ.ಕೆ.ಎನ್, ಎನ್.ಎಸ್.ಎಸ್. ಅಧಿಕಾರಿ ಡಾ|| ಲಕ್ಷ್ಮಿಪಲೋಡಿ, ಎಂ. ಲಾವಣ್ಯ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನಿರೂಪಿಸಿದರು, ಆರ್. ಸುಂದರೇಶ್ ವಂದಿಸಿದರು.

ಕ್ರೀಡಾ ಕೂಟದಲ್ಲಿ ಹಾಕಿ ಪೆನಾಲ್ಟಿ ಸೂಟ್, ಶೂಟ್ ಇನ್ ದಿ ಬ್ಯಾಸ್ಕೆಟ್, ಮ್ಯೂಸಿಕಲ್ ಚೇರ್, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಗುಂಡು ಎಸೆತ, ಉದ್ದ ಜಿಗಿತ ಆಟಗಳನ್ನು ಆಡಿಸಲಾಯಿತು.

andolana

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

1 hour ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

2 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

2 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

9 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

9 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

9 hours ago