ಜಿಲ್ಲೆಗಳು

ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯ: ಬಿ.ಎಂ. ಸವಿತಾ !

ಮೈಸೂರು: ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದ್ದು ಪ್ರತಿಯೊಬ್ಬ ಮಹಿಳೆಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಿಸಬೇಕೆಂದು ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಬಿ.ಎಂ. ಸವಿತಾ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಮಹಿಳಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮನೆ ಹಾಗೂ
ಕಚೇರಿಗಳಲ್ಲಿ ಎರಡು ಕಡೆಯು ಸಮನಾಗಿ ಕೆಲಸಮಾಡುತ್ತಾರೆ ಎಂದರು.

ಒತ್ತಡಗಳು ಇದ್ದೇ ಇರುತ್ತವೆ. ಒತ್ತಡಗಳನ್ನು ಮರೆಯಲು ಕ್ರೀಡೆ ಅನಿವಾರ್ಯವಾಗಿದ್ದು, ಗಂಡು ಮಕ್ಕಳಂತೆ ನಾವು ಸಹ ಸಾಧನೆ ಮಾಡಬಹುದು ಆದ್ದರಿಂದ
ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಡಾ|| ಕೃಷ್ಣಂರಾಜು ಮಾತನಾಡಿ ಹೆಣ್ಣು ಮಕ್ಕಳು ಸಹ ಆರೋಗ್ಯವಾಗಿರಬೇಕೆಂದು ಈ ಕ್ರೀಡಾ ಕೂಟವನ್ನು ಆಯೋಜನೆ ಮಾಡಲಾಗಿದ್ದು, ಯುರೋಪಿಯನ್ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಸಮಾನತೆ ಇದೆ. ಆದರೆ ಭಾರತದಲ್ಲಿ ಸಮಾನತೆ ಸಿಕ್ಕಿಲ್ಲದಿದ್ದರೂ ಸಹ ಮಹಿಳೆಯರು ಕೂಡ ಪುರುಷರಷ್ಟೇ ಬಲಾಡ್ಯರಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮದೇ ಆದ ಸಾಧನೆಯನ್ನುಮಾಡಿದ್ದಾರೆ ಎಂದರು.

ಕ್ರೀಡೆ ಮನಸ್ಸಿಗೆ ಉಲ್ಲಾಸವನ್ನು ಕೊಡುತ್ತದೆ. ನಾವು ಹೈಸ್ಕೂಲಿನಲ್ಲಿ ಓದುವಾಗ ಆಟವಾಡುವುದಕ್ಕೆ, ಬಿಡುವುದನ್ನೇ ಕಾಯುತ್ತಿದ್ದೆವು. ಕೆಲಸ ಮಾಡುವ ಮಹಿಳೆಯರೂ ಕೂಡ ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿಯೂ ಸಹ ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿರಿ. ಸೋಲು, ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ ಎಲ್ಲರಿಗೂ ಶುಭವಾಗಲಿ ಎಂದರು.

ಸಮಾರಂಭದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್‌ನಾಯಕ್ ಸ್ವಾಗತಿಸಿದರು. ಹಿರಿಯ ಭೂ ವಿಜ್ಞಾನಿ ಡಾ|| ಪುಷ್ಪವತಿ.ಕೆ.ಎನ್, ಎನ್.ಎಸ್.ಎಸ್. ಅಧಿಕಾರಿ ಡಾ|| ಲಕ್ಷ್ಮಿಪಲೋಡಿ, ಎಂ. ಲಾವಣ್ಯ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನಿರೂಪಿಸಿದರು, ಆರ್. ಸುಂದರೇಶ್ ವಂದಿಸಿದರು.

ಕ್ರೀಡಾ ಕೂಟದಲ್ಲಿ ಹಾಕಿ ಪೆನಾಲ್ಟಿ ಸೂಟ್, ಶೂಟ್ ಇನ್ ದಿ ಬ್ಯಾಸ್ಕೆಟ್, ಮ್ಯೂಸಿಕಲ್ ಚೇರ್, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಗುಂಡು ಎಸೆತ, ಉದ್ದ ಜಿಗಿತ ಆಟಗಳನ್ನು ಆಡಿಸಲಾಯಿತು.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

9 mins ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

3 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago