ಜಿಲ್ಲೆಗಳು

ಪೊಲೀಸರ ಕಾರ್ಯಕ್ಷಮತೆಗೆ ಕ್ರೀಡೆ ಬಹಳ ಮುಖ್ಯ: ಪೂರ್ಣಿಮ

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು.

ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮೈಸೂರು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿ, ವಂದನೆ ಸ್ವೀಕರಿಸಿ ಹಾಗೂ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ನಿಮ್ಮ ದಿನದ ಒಂದೂವರೆ ಗಂಟೆ ನಿಮ್ಮ ಆರೋಗ್ಯಕ್ಕಾಗಿ ಮೀಸಲಿಡಿ. ದಿನನಿತ್ಯ ವ್ಯಾಯಮ ಮಾಡುವ ಮೂಲಕ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಿ. ನನಗೆ ಪೋಲಿಸ್ ಇಲಾಖೆ ತುಂಬ ಪ್ರಿಯವಾದ ಇಲಾಖೆ. ನಮ್ಮ ಪೋಷಕರು ಆರೋಗ್ಯ ಇಲಾಖೆಯಲ್ಲಿದ್ದರು. ಹಾಗಾಗಿ ನಾನು ಹೆಚ್ಚು ಪಿಹೆಚ್‌ಸಿ ವಸತಿನಿಲಯಗಳಲ್ಲಿ ಬೆಳೆಯಬೇಕಾಯಿತು. ನನ್ನ ಸಹೋದರರು ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಪೊಲೀಸ್ ಇಲಾಖೆ ನನಗೆ ಪ್ರಿಯವಾದ ಇಲಾಖೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಕಾನೂನು ನಿರ್ವಹಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರು ಹೆಚ್ಚಿನ ಒತ್ತಡದಿಂದ ಕಾರ್ಯನಿರ್ವಹಿಸುತ್ತಿರುತ್ತಾರೆ. ಈ ದಿಸೆಯಲ್ಲಿ ಕ್ರೀಡೆ ಕೂಡ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಹೆಚ್ಚಿನ ಕಾರ್ಯಕ್ಷಮತೆ, ದಕ್ಷತೆ, ಮನೋಬಲ, ನೈತಿಕ ಸ್ಥೈರ್ಯ ಹಾಗೂ ದೈಹಿಕ ಆರೋಗ್ಯ ವೃದ್ಧಿಗಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೆಲಸದ ಜೊತೆಗೆ ಪ್ರತಿನಿತ್ಯ ಯವುದಾದರೊಂದು ಕ್ರೀಡೆಯನ್ನು ಹವ್ಯಾಸವನ್ನಾಗಿ ಮಾಡಿಕೊಂಡರೆ ಉತ್ತಮ ಎಂದರು. ಇದನ್ನು ಬಹಳಷ್ಟು ಜನ ರೂಢಿಸಿಕೊಂಡಿರುವುದನ್ನು ಕಂಡಿದ್ದೇನೆ ಎಂದರು.

ಇದೇ ವೇಳೆ ಸ್ಪರ್ಧಿಗಳು ಕ್ರೀಡಾ ಪ್ರಮಾಣವಚನವನ್ನು ಸ್ವೀಕರಿಸಿದರು. ಆಕರ್ಷಕ ಪಥಸಂಚಲನ ನಡೆಯಿತು. ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ನ.೨೪ ರಂದು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ಪ್ರವೀಣ್ ಮಧುಕರ್ ಪವಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

andolana

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago