ಜಿಲ್ಲೆಗಳು

ಗನ್‌ಹೌಸ್‌ ವೃತ್ತದಲ್ಲಿ ರಾಜೇಂದ್ರ ಶ್ರೀ ಪ್ರತಿಮೆ ಸ್ಥಾಪನೆ

2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್‌ಹೌಸ್‌ ಸರ್ಕಲ್‌ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಪೀಠವು ನಿರ್ಮಾಣಕ್ಕೆ ತಡೆ ನೀಡಿದ್ದರು.

 

ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪಾದಾಚಾರಿ ಮಾರ್ಗಗಳಲ್ಲಿ ಪುತ್ಥಳಿಗಳನ್ನು ನಿರ್ಮಾಣ ಮಾಡುವಂತಿಲ್ಲ ಎಂದು 2013ರಲ್ಲಿ ಸುಪ್ರೀಂ ಕೋರ್ಟ್‌ ಸೂಚಿಸಿದೆ ಎಂದು ಹೈಕೋರ್ಟ್‌ ಉಲ್ಲೇಖಿಸಿತ್ತು. ಹೀಗೆ ಹೈಕೋರ್ಟ್‌ ವಿರೋಧವಿದ್ದರೂ ಸಹ ಇಂದು ( ಡಿಸೆಂಬರ್‌ 8 ) ನಗರದ ಗನ್‌ಹೌಸ್‌ ವೃತ್ತದಲ್ಲಿ ರಾತ್ರೋರಾತ್ರಿ ಕ್ರೇನ್‌ ಮೂಲಕ ದಿಢೀರನೆ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿಯನ್ನು ನಿಲ್ಲಿಸಲಾಗಿದೆ. ಸದ್ಯ ಈ ಘಟನೆಯ ಫೋಟೊ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

 

ಈ ಹಿಂದೆ ಇದೇ ಗನ್ ಹೌಸ್ ಬಳಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪಿಸಲು ಅರಸು ಸಂಘ ಮೈಸೂರು ಮಹಾನಗರ ಪಾಲಿಕೆಯನ್ನು ಸಂಪರ್ಕಿಸಿತ್ತು. ಆದರೆ ಸುಪ್ರೀಂ ಕೋರ್ಟ್‌ ನಿರ್ದೇಶನದ ಪ್ರಕಾರ ಈ ಸ್ಥಳ ಆರು ರಸ್ತೆಗಳು ಕೂಡುವ ವೃತ್ತವಾಗಿದ್ದು, ಇದು ಜನನಿಬಿಡ ಸ್ಥಳವಾಗಿದೆ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪಾದಾಚಾರಿ ಮಾರ್ಗಗಳಲ್ಲಿ ಪುತ್ಥಳಿಗಳನ್ನು ನಿರ್ಮಾಣ ಮಾಡುವಂತಿಲ್ಲ ಎಂದು ತಡೆ ಬಂದ ಕಾರಣ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಯನ್ನು ಕೈಬಿಡಲಾಗಿತ್ತು. ಆದರೆ ಬಳಿಕ ಇದೇ ಜಾಗದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆಯಾದ ಕಾರಣ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ ಮೆಟ್ಟಿಲೇರಿತ್ತು.

andolana

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

7 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

8 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

10 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

11 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

14 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

14 hours ago