ಜಿಲ್ಲೆಗಳು

ಮಗ ಶ್ರೀದತ್ತಾತ್ರೇಯನನ್ನು ತೋರದಂತೆ ಮಡಿಲಲ್ಲೇ ನಿಲ್ಲಿಸಿಕೊಂಡಿದ್ದ ಲಕ್ಷ್ಮಿ

ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ  ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ   ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ ವಿಚಾರಿಸಿದರು. ಅರಮನೆಯ ಆನೆ ಲಾಯದಲ್ಲಿ ಪ್ರತ್ಯೇಕವಾಗಿ ಇರಿಸಿರುವ ಲಕ್ಷ್ಮಿ,ಶ್ರೀದತ್ತಾತ್ರೇಯನನ್ನು ಕೆಲ ಹೊತ್ತು ನೋಡಿದರು.
ಬಳಿಕ ಡಿಸಿಎಫ್ ಡಾ.ವಿ.ಕರಿಕಾಳನ್ ಅವರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಆನೆಯ ಹತ್ತಿರಕ್ಕೆ ಹೋಗಲು ಸಾಧ್ಯವಾಗದ ಕಾರಣ ದೂರದಲ್ಲೇ ನಿಂತು ವೀಕ್ಷಿಸಿದರು. ಹತ್ತಕ್ಕೂ ಜನರು ದೂರದಲ್ಲಿ ತಮ್ಮನ್ನು ನೋಡುತ್ತಿದ್ದನ್ನು ಗಮನಿಸಿದ ಲಕ್ಷ್ಮಿ ತನ್ನ ಮಗುವನ್ನು ಮಡಿಲಲ್ಲೇ ನಿಲ್ಲಿಸಿಕೊಂಡಿತ್ತು.
ಬಳಿಕ ಮಾವುತ ತನ್ನ ಮಾತಿನಿಂದ ಮರಿಯನ್ನು ಹೊರಗೆ ಬರುವಂತೆ ಮಾಡಿ ಸಚಿವರಿಗೆ ದರ್ಶನ ಸಿಗುವಂತೆ ಮಾಡಿದರು. ಸಂಸದ ಪ್ರತಾಪ್ ಸಿಂಹ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಡಿಸಿ ಡಾ.ಬಗಾದಿಗೌತಮ್,ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಇನ್ನಿತರರು ಹಾಜರಿದ್ದರು.

andolanait

Recent Posts

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

24 mins ago

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

46 mins ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

2 hours ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

2 hours ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

2 hours ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

3 hours ago