ಜಿಲ್ಲೆಗಳು

ಮಗ ಶ್ರೀದತ್ತಾತ್ರೇಯನನ್ನು ತೋರದಂತೆ ಮಡಿಲಲ್ಲೇ ನಿಲ್ಲಿಸಿಕೊಂಡಿದ್ದ ಲಕ್ಷ್ಮಿ

ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ  ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ   ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ ವಿಚಾರಿಸಿದರು. ಅರಮನೆಯ ಆನೆ ಲಾಯದಲ್ಲಿ ಪ್ರತ್ಯೇಕವಾಗಿ ಇರಿಸಿರುವ ಲಕ್ಷ್ಮಿ,ಶ್ರೀದತ್ತಾತ್ರೇಯನನ್ನು ಕೆಲ ಹೊತ್ತು ನೋಡಿದರು.
ಬಳಿಕ ಡಿಸಿಎಫ್ ಡಾ.ವಿ.ಕರಿಕಾಳನ್ ಅವರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಆನೆಯ ಹತ್ತಿರಕ್ಕೆ ಹೋಗಲು ಸಾಧ್ಯವಾಗದ ಕಾರಣ ದೂರದಲ್ಲೇ ನಿಂತು ವೀಕ್ಷಿಸಿದರು. ಹತ್ತಕ್ಕೂ ಜನರು ದೂರದಲ್ಲಿ ತಮ್ಮನ್ನು ನೋಡುತ್ತಿದ್ದನ್ನು ಗಮನಿಸಿದ ಲಕ್ಷ್ಮಿ ತನ್ನ ಮಗುವನ್ನು ಮಡಿಲಲ್ಲೇ ನಿಲ್ಲಿಸಿಕೊಂಡಿತ್ತು.
ಬಳಿಕ ಮಾವುತ ತನ್ನ ಮಾತಿನಿಂದ ಮರಿಯನ್ನು ಹೊರಗೆ ಬರುವಂತೆ ಮಾಡಿ ಸಚಿವರಿಗೆ ದರ್ಶನ ಸಿಗುವಂತೆ ಮಾಡಿದರು. ಸಂಸದ ಪ್ರತಾಪ್ ಸಿಂಹ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಡಿಸಿ ಡಾ.ಬಗಾದಿಗೌತಮ್,ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಇನ್ನಿತರರು ಹಾಜರಿದ್ದರು.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

44 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

54 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

59 mins ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

1 hour ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

23 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

23 hours ago