ಜಿಲ್ಲೆಗಳು

ಮಗ ಶ್ರೀದತ್ತಾತ್ರೇಯನನ್ನು ತೋರದಂತೆ ಮಡಿಲಲ್ಲೇ ನಿಲ್ಲಿಸಿಕೊಂಡಿದ್ದ ಲಕ್ಷ್ಮಿ

ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ  ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ   ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ ವಿಚಾರಿಸಿದರು. ಅರಮನೆಯ ಆನೆ ಲಾಯದಲ್ಲಿ ಪ್ರತ್ಯೇಕವಾಗಿ ಇರಿಸಿರುವ ಲಕ್ಷ್ಮಿ,ಶ್ರೀದತ್ತಾತ್ರೇಯನನ್ನು ಕೆಲ ಹೊತ್ತು ನೋಡಿದರು.
ಬಳಿಕ ಡಿಸಿಎಫ್ ಡಾ.ವಿ.ಕರಿಕಾಳನ್ ಅವರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಆನೆಯ ಹತ್ತಿರಕ್ಕೆ ಹೋಗಲು ಸಾಧ್ಯವಾಗದ ಕಾರಣ ದೂರದಲ್ಲೇ ನಿಂತು ವೀಕ್ಷಿಸಿದರು. ಹತ್ತಕ್ಕೂ ಜನರು ದೂರದಲ್ಲಿ ತಮ್ಮನ್ನು ನೋಡುತ್ತಿದ್ದನ್ನು ಗಮನಿಸಿದ ಲಕ್ಷ್ಮಿ ತನ್ನ ಮಗುವನ್ನು ಮಡಿಲಲ್ಲೇ ನಿಲ್ಲಿಸಿಕೊಂಡಿತ್ತು.
ಬಳಿಕ ಮಾವುತ ತನ್ನ ಮಾತಿನಿಂದ ಮರಿಯನ್ನು ಹೊರಗೆ ಬರುವಂತೆ ಮಾಡಿ ಸಚಿವರಿಗೆ ದರ್ಶನ ಸಿಗುವಂತೆ ಮಾಡಿದರು. ಸಂಸದ ಪ್ರತಾಪ್ ಸಿಂಹ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಡಿಸಿ ಡಾ.ಬಗಾದಿಗೌತಮ್,ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಇನ್ನಿತರರು ಹಾಜರಿದ್ದರು.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago