ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್ ಸಂಪರ್ಕ ವನ್ನು ಸೆಸ್ಕ್ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು.
ತಹಶೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಉಪ ಖಜಾನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ‘ಯುಪಿಎಸ್ ಇರುವೆಡೆ ಕೆಲಸಗಳು ನಡೆದವು. ಬುಧವಾರ ಸಂಪರ್ಕ ಕಲ್ಪಿಸ ದಿದ್ದರೆ ಎಲ್ಲ ಕೆಲಸಗಳು ಸ್ಥಗಿತಗೊಳ್ಳಲಿವೆ’ ಎಂದು ಸಿಬ್ಬಂದಿ ತಿಳಿಸಿದರು.
‘ಎಲ್ಲ ಕಚೇರಿಗಳಿಗೂ ಸೇರಿ ಒಂದೇ ಮೀಟರ್ ಅಳವಡಿಸಿದ್ದು, ಕಂದಾಯ ಇಲಾಖೆಯೇ ಬಿಲ್ ಪಾವತಿಸಬೇಕಾಗಿದೆ. ಜಿಲ್ಲಾಧಿಕಾರಿ ಗಮನ ಸೆಳೆದಿದ್ದೇನೆ’ ಎಂದು ತಹಶೀಲ್ದಾರ್ ಶ್ವೇತಾ ರವೀಂದ್ರ ಪ್ರತಿಕ್ರಿಯಿಸಿದರು. ‘ಸದ್ಯ ₹50 ಸಾವಿರ ದವರೆಗೆ ಪಾವತಿಸಬಹುದು. ಉಳಿದದ್ದನ್ನು ಎಲ್ಲಿಂದ ತರಲಿ’ ಎಂದು ಪ್ರಶ್ನಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…