ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಆರ್.ಮೋಹನ್ರೆಡ್ಡಿ ಹಾಗೂ ಜಿ.ಕೆ.ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲುಗಳಿದ್ದಲ್ಲಿ ಸ್ವೀಕರಿಸಲಾಗುವುದು. ಶ್ರೀರಂಗಪಟ್ಟಣ ತಾಲ್ಲೂಕಿನ ಸಾರ್ವಜನಿಕರು ಅಂದು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು ಮತ್ತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾುಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.





