ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಆರ್.ಮೋಹನ್ರೆಡ್ಡಿ ಹಾಗೂ ಜಿ.ಕೆ.ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲುಗಳಿದ್ದಲ್ಲಿ ಸ್ವೀಕರಿಸಲಾಗುವುದು. ಶ್ರೀರಂಗಪಟ್ಟಣ ತಾಲ್ಲೂಕಿನ ಸಾರ್ವಜನಿಕರು ಅಂದು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು ಮತ್ತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾುಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ…
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…