ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಆರ್.ಮೋಹನ್ರೆಡ್ಡಿ ಹಾಗೂ ಜಿ.ಕೆ.ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲುಗಳಿದ್ದಲ್ಲಿ ಸ್ವೀಕರಿಸಲಾಗುವುದು. ಶ್ರೀರಂಗಪಟ್ಟಣ ತಾಲ್ಲೂಕಿನ ಸಾರ್ವಜನಿಕರು ಅಂದು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು ಮತ್ತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾುಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…