ಹನೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು.
ತಾಲೂಕಿನ ಬೈಲೂರು ಹೊಸಪಾಳ್ಯ ಅರೆಕಾಡುವಿನ ದೊಡ್ಡಿ ಕಂಬಿಗುಡ್ಡೆ, ಗುರುಮಲ್ಲಪ್ಪನ ದೊಡ್ಡಿ ಹುಣಸೇಪಾಳ್ಯ ಗ್ರಾಮಗಳ ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಅವರು ಮಾತನಾಡಿದರು.
ಕಳೆದ ಐದು ವರ್ಷಗಳಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಹನೂರು ಶೈಕ್ಷಣಿಕ ವಲಯ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದೇ ನಿಟ್ಟಿನಲ್ಲಿ ಈ ಬಾರಿಯೂ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಮಾಡುವ ಪಾಠ ಪ್ರವಚನಗಳ ಬಗ್ಗೆ ಆಸಕ್ತಿ ವಹಿಸಿ ಮನೆಯಲ್ಲಿಯೂ ಸಹ ಚೆನ್ನಾಗಿ ಓದಿಕೊಳ್ಳಬೇಕು, ವಿದ್ಯಾರ್ಥಿಗಳಿಗೆ ಪೋಷಕರು ಸಹ ಸಹಕರಿಸಿ ಅವರ ಓದಿಗೆ ಶ್ರಮಿಸಬೇಕು ಹಾಗಾದರೆ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಯ ಉತ್ತಮ ಅಂಕ ಗಳಿಸಲು ಸಾಧ್ಯ ಎಂದರು.
ಪ್ರತಿ ಮನೆಗಳಿಗೂ ಭೇಟಿ: ಕಾಡಂಚಿನ ಗ್ರಾಮಗಳ ವಿದ್ಯಾರ್ಥಿಗಳ ಪ್ರತಿ ಮನೆಗಳಿಗೆ ಖುದ್ದು ಭೇಟಿ ನೀಡಿ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳು ಯಾವ ಪಾಠಗಳು ನಿಮಗೆ ಕಷ್ಟವೆನಿಸುತ್ತಿದೆ ಅದರ ಬಗ್ಗೆ ಸಂಬಂಧಪಟ್ಟ ಶಿಕ್ಷಕರುಗಳ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಹಾಗಿದ್ದರೆ ಮಾತ್ರ ನೀವು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು ಇದೇ ಸಂದರ್ಭದಲ್ಲಿ ಪೋಷಕರಿಗೂ ಸಹ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದರು.
ಸಾರ್ವಜನಿಕರಿಂದ ಮೆಚ್ಚುಗೆ : ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಇನ್ನು ಮೂರು ತಿಂಗಳು ಗಳ ಕಾಲಾವಕಾಶ ಇದ್ದರು ಸಹ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈಗಿನಿಂದಲೇ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದ್ದಾರೆ. ಇದರಿಂದ ಆತ್ಮಸ್ಥೈರ್ಯ ಹೆಚ್ಚಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಾರೆ ಎಂದು ಪೋಷಕರು ಪ್ರಶಂಸೆ ವ್ಯಕ್ತಪಡಿಸಿದರು.
ವಿವಿಧ ಕಾರಣಗಳಿಂದ ಶಾಲೆ ಬಿಟ್ಟ ಮೂವರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿನೀಡಿ ಮನವೊಲಿಸಿ ಶಾಲೆಗೆ ಬರುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಒಡೆಯರಪಾಳ್ಯ ಸಿ ಆರ್ ಪಿ ನಟೇಶ್ ಪಿ ಜಿ ಪಾಳ್ಯ ಸಿ ಆರ್ ಪಿ ದೇವರಾಜು, ಮುಖ್ಯ ಶಿಕ್ಷಕ ಚುಂಚಯ್ಯ ಸಹ ಶಿಕ್ಷಕರುಗಳಾದ ವಿ.ವೆಂಕಟೇಶ್, ಮೋಹನ್ ಕುಮಾರ್, ರಾಘವೇಂದ್ರ, ಕೆ.ವೆಂಕಟೇಶ್, ಚಿದಾನಂದ, ರವಿಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…