ಜಿಲ್ಲೆಗಳು

SSLC ವಿದ್ಯಾರ್ಥಿಗಳೊಂದಿಗೆ ಶಾಸಕ ಆರ್ ನರೇಂದ್ರ ಸಂವಾದ

ಹನೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಂಡು ಮುಂದಿನ ಬಾರಿಯೂ ಗರಿಷ್ಠ ಫಲಿತಾಂಶ ಪಡೆಯುವ ಮೂಲಕ ಹನೂರು ತಾಲ್ಲೂಕಿಗೆ ಕೀರ್ತಿ ತರುವಂತಗಬೇಕು ಎಂದು ಶಾಸಕ ನರೇಂದ್ರ ತಿಳಿಸಿದರು.

ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರಣ್ಯದೊಳಗಿನ ಗ್ರಾಮದ ಮಕ್ಕಳು ಹನೂರು ಪಟ್ಟಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದಕ್ಕೆ ಕಾರಣ ಸರ್ಕಾರ ನೀಡಿರುವ ಸೌಲತ್ತುಗಳು. ಸರ್ಕಾರಿ ಶಾಲಾ ಕಾಲೇಜುಗಳು ಗ್ರಾಮೀಣ ಮಟ್ಟದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಕಾಳಜಿ ವಹಿಸುತ್ತಿವೆ. ಆದ್ದರಿಂದ ವಿವಿಧ ಗ್ರಾಮಗಳಿಂದ ಬಂದು ವಿದ್ಯಾಭ್ಯಾಸ ಮಾಡುವ ಎಲ್ಲಾ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು. ಸರ್ಕಾರದ ಈ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕು ರೂಪಿಸಿಕೊಂಡು, ನಿಮ್ಮ ಗ್ರಾಮಕ್ಕೆ ಮತ್ತು ನಿಮ್ಮ ತಂದೆ ತಾಯಿಗಳಿಗೆ ಗೌರವ ತರುವಂತಹ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸೋಮಶೇಖರ್, ಸಂಪತ್ ಕುಮಾರ್, ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಕಾಲೇಜು ಪ್ರಾಂಶುಪಾಲ ಸ್ವಾಮಿ ಬಿ ಆರ್ ಸಿ ದಿನೇಶ್, ಶಿಕ್ಷಕರು ಉಪನ್ಯಾಸಕರು ಮತ್ತು ಮಕ್ಕಳು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago