ಚಾಮರಾಜನಗರ: ಬಿಜೆಪಿ ವತಿಯಿಂದ ಎಸ್ಟಿ ಮೋರ್ಚಾದ ಬೃಹತ್ ಸಮಾವೇಶವು ನ.೨೦ ರಂದು ಬಳ್ಳಾರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ೬ ರಿಂದ ೭ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು.
ಬಜೆಪಿಯ ರಾಷ್ಟ್ರೀಯ ಅಧ್ಯಕ್ಷ .ಪಿ.ನಡ್ಡಾ ಅವರು ಭಾಗವಹಿಸುವ ಸಮಾವೇಶಕ್ಕೆ ಜಿಲ್ಲೆಯಿಂದ ೫೦ ಬಸ್ಗಳಲ್ಲಿ ಜನರು ತೆರಳಲಿದ್ದಾರೆ. ಮೀಸಲು ಹೆಚ್ಚಳ ಮಾಡಿದ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರಿಗೆ ಅಭಿನಂದನೆ ಸಲ್ಲಿಸಲು ಸಮಾವೇಶ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಮಾವೇಶದಲ್ಲಿ ೧೦ ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಕೊಪ್ಪಳ, ರಾಯಚೂರು, ಚಿತ್ರದುರ್ಗ, ಬಳ್ಳಾರಿ ಸುತ್ತಲಿನ ಪ್ರದೇಶಗಳಿಂದ ಅತಿ ಹೆಚ್ಚು ಜನರನ್ನು ನಿರೀಕ್ಷಿಸಲಾಗಿದೆ ಎಂದರು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದು ೪೦ ವರ್ಷಗಳ ಕಾಲ ಹೋರಾಟ ಮಾಡಲಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ವಾಲ್ಮೀಕಿ ಭವನ ನಿರ್ಮಾಣಕ್ಕೆ ತಲಾ ೧ ಕೋಟಿ ರೂ. ನೀಡಿದರು. ವಾಲ್ಮೀಕಿ ಜಯಂತಿ ಆಚರಣೆಗೆ ಆದೇಶಿಸಿ ಸರ್ಕಾರಿ ರಜೆ ಘೋಷಿಸಿದರು. ಪರಿವಾರ ಮತ್ತು ತಳವಾರ ಎಂಬ ಪದಗಳನ್ನು ಎಸ್ಟಿ ಪಟ್ಟಿಗೆ ಸೇರಿಸಿದ್ದಾರೆ ಎಂದರು.
ಪರಿಶಿಷ್ಟ ಪಂಗಡದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ೨೫೪ ದಿನಗಳ ಕಾಲ ಹೋರಾಟ ಮಾಡಿ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ಧಾರೆ. ಇದಕ್ಕೆ ಮುಖ್ಯಮಂತ್ರಿ ಕಾರಣ. ಇದೆಲ್ಲವನ್ನು ಸಮಾವೇಶ ಮೂಲಕ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…