ಜಿಲ್ಲೆಗಳು

ದಸರೆ ಯಶಸ್ಸಿಗಾಗಿ ಮೈಸೂರು ಬಿಟ್ಟು ಕದಲದ ಎಸ್ ಟಿಎಸ್

ಮೈಸೂರು : ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಣೆ ಮಾಡಲಾಗಿದ್ದ ದಸರಾ ಮಹೋತ್ಸವ ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಗ್ರಾಮೀಣ ದಸರಾ, ಮಹಿಳಾ ಮತ್ತು ಮಕ್ಕಳ ದಸರಾ, ಕವಿಗೋಷ್ಠಿ, ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜನಸಾಗರ ಹರಿದು ಬರುತ್ತಿದೆ. ಆಹಾರ ಮೇಳದಲ್ಲಿ 11 ಗಂಟೆಯಾದರೂ ಜನದಟ್ಟಣೆಯಿಂದ ಕೂಡಿದೆ.

ಲಕ್ಷಾಂತರ ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದ್ದು ಎಲ್ಲವೂ ಬಹಳ ಅಚ್ಚುಕಟ್ಟಾಗಿ ನೆರವೇರುತ್ತಿರುವುದರ ಹಿಂದೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಕಾರ್ಯಕ್ಷಮತೆ, ಪೂರ್ವಸಿದ್ಧತೆಗಳ ಜೊತೆಗೆ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುತ್ತಿರುವ ಗುಣವೇ ಕಾರಣ ಎನ್ನಲಾಗುತ್ತಿದೆ.

ನವರಾತ್ರಿ ಆರಂಭಕ್ಕೂ ಮುನ್ನವೇ ಮೈಸೂರಿಗೆ ಆಗಮಿಸಿದ ಸಚಿವ ಸೋಮಶೇಖರ್ ಅವರೇ ಖುದ್ದು ಮುತುವರ್ಜಿ ವಹಿಸಿಸುತ್ತಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳನ್ನು ಒಟ್ಟಿಗೆ ಕರೆದೊಯ್ಯುತ್ತಿರುವುದರ ಫಲವಾಗಿ ದಸರಾ ಕಾರ್ಯಕ್ರಮಗಳು ಸುಸೂತ್ರವಾಗಿ ಸಾಗುತ್ತಿವೆ.

ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಷ್ಟೇ ಅಲ್ಲದೆ ಯಾವುದೇ ಸಮಸ್ಯೆಯಾದರೆ ಸ್ಥಳದಲ್ಲೇ ಬಗೆಹರಿಸಿ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಆಹಾರಮೇಳಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಸ್ವಚ್ಛತೆಯ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ರಾತ್ರಿವೇಳೆ ನಗರ ಸಂಚಾರ ಮಾಡಿ ವಸ್ತುಸ್ಥಿತಿ ಅವಲೋಕಿಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ದಸರಾದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜೊತೆಗೆ ದಸರಾ ಮುಕ್ತಾಯವಾಗುವವರೆಗೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ಸಚಿವರು ಸೋಮಶೇಖರ್ ಮಾತ್ರ. ಯಾರು ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಿದರು ಇಲ್ಲ ಎನ್ನದೆ ಹಾಜರಾಗುವುದರ ಜೊತೆಗೆ ಜನಸಾಮಾನ್ಯರೊಂದಿಗೆ ದಸರಾದ ಬಗ್ಗೆ ಮಾಹಿತಿ ಕೂಡ ತೆಗೆದುಕೊಳ್ಳುತ್ತಿದ್ದಾರೆ.

12 ದಿನಗಳ ಕಾಲ ಮೈಸೂರಿನಲ್ಲಿ ನೆಲೆನಿಂತು ದಸರಾ ಮಹೋತ್ಸವಕ್ಕೆ ತಮ್ಮನ್ನು ತಾವೇ ತೊಡಗಿಸಿಕೊಂಡಿರುವ ಏಕೈಕ ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಅದು ಸೋಮಶೇಖರ್ ಮಾತ್ರ ಎಂಬ ಮಾತುಗಳು ಈಗ ಜಿಲ್ಲೆಯ ಎಲ್ಲೆಡೆ ಕೇಳಿಬರುತ್ತಿದೆ.

andolanait

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

20 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

24 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

57 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

1 hour ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

2 hours ago