ಜಿಲ್ಲೆಗಳು

ದಸರೆ ಯಶಸ್ಸಿಗಾಗಿ ಮೈಸೂರು ಬಿಟ್ಟು ಕದಲದ ಎಸ್ ಟಿಎಸ್

ಮೈಸೂರು : ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಣೆ ಮಾಡಲಾಗಿದ್ದ ದಸರಾ ಮಹೋತ್ಸವ ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಗ್ರಾಮೀಣ ದಸರಾ, ಮಹಿಳಾ ಮತ್ತು ಮಕ್ಕಳ ದಸರಾ, ಕವಿಗೋಷ್ಠಿ, ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜನಸಾಗರ ಹರಿದು ಬರುತ್ತಿದೆ. ಆಹಾರ ಮೇಳದಲ್ಲಿ 11 ಗಂಟೆಯಾದರೂ ಜನದಟ್ಟಣೆಯಿಂದ ಕೂಡಿದೆ.

ಲಕ್ಷಾಂತರ ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದ್ದು ಎಲ್ಲವೂ ಬಹಳ ಅಚ್ಚುಕಟ್ಟಾಗಿ ನೆರವೇರುತ್ತಿರುವುದರ ಹಿಂದೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಕಾರ್ಯಕ್ಷಮತೆ, ಪೂರ್ವಸಿದ್ಧತೆಗಳ ಜೊತೆಗೆ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುತ್ತಿರುವ ಗುಣವೇ ಕಾರಣ ಎನ್ನಲಾಗುತ್ತಿದೆ.

ನವರಾತ್ರಿ ಆರಂಭಕ್ಕೂ ಮುನ್ನವೇ ಮೈಸೂರಿಗೆ ಆಗಮಿಸಿದ ಸಚಿವ ಸೋಮಶೇಖರ್ ಅವರೇ ಖುದ್ದು ಮುತುವರ್ಜಿ ವಹಿಸಿಸುತ್ತಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳನ್ನು ಒಟ್ಟಿಗೆ ಕರೆದೊಯ್ಯುತ್ತಿರುವುದರ ಫಲವಾಗಿ ದಸರಾ ಕಾರ್ಯಕ್ರಮಗಳು ಸುಸೂತ್ರವಾಗಿ ಸಾಗುತ್ತಿವೆ.

ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಷ್ಟೇ ಅಲ್ಲದೆ ಯಾವುದೇ ಸಮಸ್ಯೆಯಾದರೆ ಸ್ಥಳದಲ್ಲೇ ಬಗೆಹರಿಸಿ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಆಹಾರಮೇಳಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಸ್ವಚ್ಛತೆಯ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ರಾತ್ರಿವೇಳೆ ನಗರ ಸಂಚಾರ ಮಾಡಿ ವಸ್ತುಸ್ಥಿತಿ ಅವಲೋಕಿಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ದಸರಾದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜೊತೆಗೆ ದಸರಾ ಮುಕ್ತಾಯವಾಗುವವರೆಗೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ಸಚಿವರು ಸೋಮಶೇಖರ್ ಮಾತ್ರ. ಯಾರು ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಿದರು ಇಲ್ಲ ಎನ್ನದೆ ಹಾಜರಾಗುವುದರ ಜೊತೆಗೆ ಜನಸಾಮಾನ್ಯರೊಂದಿಗೆ ದಸರಾದ ಬಗ್ಗೆ ಮಾಹಿತಿ ಕೂಡ ತೆಗೆದುಕೊಳ್ಳುತ್ತಿದ್ದಾರೆ.

12 ದಿನಗಳ ಕಾಲ ಮೈಸೂರಿನಲ್ಲಿ ನೆಲೆನಿಂತು ದಸರಾ ಮಹೋತ್ಸವಕ್ಕೆ ತಮ್ಮನ್ನು ತಾವೇ ತೊಡಗಿಸಿಕೊಂಡಿರುವ ಏಕೈಕ ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಅದು ಸೋಮಶೇಖರ್ ಮಾತ್ರ ಎಂಬ ಮಾತುಗಳು ಈಗ ಜಿಲ್ಲೆಯ ಎಲ್ಲೆಡೆ ಕೇಳಿಬರುತ್ತಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago