ಜಿಲ್ಲೆಗಳು

ರಾಜ್ಯ ಸಹಕಾರ ಮಹಾಮಂಡಲಕ್ಕೆ 2 ಕೋಟಿ ರೂ ಚೆಕ್ ಹಸ್ತಾಂತರ

ಬೆಂಗಳೂರು– ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಗೆ 2 ಕೋಟಿ ರೂ.ಗಳನ್ನು ಮಹಾಮಂಡಲದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.
ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾಮಂಡಲದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು.
ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

27 seconds ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

16 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

33 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

46 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago