ಜಿಲ್ಲೆಗಳು

ರಾಜ್ಯ ಸಹಕಾರ ಮಹಾಮಂಡಲಕ್ಕೆ 2 ಕೋಟಿ ರೂ ಚೆಕ್ ಹಸ್ತಾಂತರ

ಬೆಂಗಳೂರು– ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಗೆ 2 ಕೋಟಿ ರೂ.ಗಳನ್ನು ಮಹಾಮಂಡಲದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.
ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾಮಂಡಲದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು.
ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.

andolanait

Recent Posts

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…

19 mins ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

4 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

4 hours ago

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…

4 hours ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

4 hours ago

ದಿ ಕೇರಳ ಸ್ಟೋರಿ-2 : ಸತ್ಯ V/S ಅಜೆಂಡಾ..!

ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…

4 hours ago