ಜಿಲ್ಲೆಗಳು

ರಾಜ್ಯ ಸಹಕಾರ ಮಹಾಮಂಡಲಕ್ಕೆ 2 ಕೋಟಿ ರೂ ಚೆಕ್ ಹಸ್ತಾಂತರ

ಬೆಂಗಳೂರು– ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಗೆ 2 ಕೋಟಿ ರೂ.ಗಳನ್ನು ಮಹಾಮಂಡಲದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.
ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾಮಂಡಲದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು.
ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

8 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

9 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

9 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

9 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

10 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

18 hours ago