ಬೆಂಗಳೂರು– ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಗೆ 2 ಕೋಟಿ ರೂ.ಗಳನ್ನು ಮಹಾಮಂಡಲದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.
ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾಮಂಡಲದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು.
ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…