ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಸರ್ಕಾರವು ಐದು ವರ್ಷ ಅವಧಿಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ ಹೊರಡಿಸಿದೆ.
ಪ್ರೊ.ಉಷಾರಾಣಿ ಅವರು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಸಂಸ್ಥೆ (ಇಎಂಆರ್ಸಿ)ಯ ನಿರ್ದೇಶಕರಾಗಿ, ಕಲಾ ನಿಕಾಯದ ಡೀನರಾಗಿ, ಯುಜಿಸಿ–ಯುಪಿಇ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಇವರು ಐಸಿಎಸ್ಎಸ್ಆರ್ ಹಿರಿಯ ಪ್ರೊಫೆಸರ್ ಫೆಲೊ ಆಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಇವರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಇನ್ನೂ ಮೈಂಡ್ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…