ಜಿಲ್ಲೆಗಳು

ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್ ಎಲ್.ನಾಗೇಂದ್ರ ಚಾಲನೆ…

ಮೈಸೂರು : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್‌ಸಿಎವಿಸಿ ಸಹಯೋಗದಲ್ಲಿ ಎರಡು ದಿನಗಳ ಕಾಲ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಪುನೀತ್ ರಾಜ್‌ಕುಮಾರ್ ಅವರ ಪ್ರೇರಣೆಯಿಂದ ಅನೇಕರು ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ. ಹೃದಯವಂತಿಕೆಯಿಂದ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂದರು.

ನನಗೂ ಚದುರಂಗ ಆಟ ಹೆಚ್ಚು ಇಷ್ಟ. ನಾನೂ ಆಡುತ್ತೇನೆ. ಇದು ಶಕ್ತಿಯಿಂದ ಆಡುವ ಆಟವಲ್ಲ. ಯುಕ್ತಿಯಿಂದ ಆಡುವ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಉತ್ತಮವಾಗಿ ಆಟವಾಡಿ ಎಂದು ಶುಭ ಹಾರೈಸಿದರು.

ನಗರ ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು ಮಾತನಾಡಿ, ಇಲ್ಲಿನ ಸ್ಪರ್ಧಿಗಳಿಗೆ ಕಣ್ಣು ಕಾಣದೆ ಇರಬಹುದು. ಮುಖದಲ್ಲಿ ಯಾವಾಗಲೂ ಸಂತೋಷವಿರುತ್ತದೆ. ಆದರೆ, ಕಣ್ಣು ಕಾಣುವ ನಮ್ಮ ಮುಖಗಳಲ್ಲಿ ಆ ಸಂತೋಷ ಕಾಣುವುದಿಲ್ಲ. ಈ ಸಂತೋಷ ಯಾವಾಗಲೂ ಇರಲಿ ಎಂದು ಹಾರೈಸಿದರು.

ಇದೊಂದು ಮಾನವೀಯ ಸ್ಪರ್ಧೆಯಾಗಿದೆ. ಕಣ್ಣಿದ್ದೂ ಕುರುಡಾಗಿರುವ ಅನೇಕರು ಹೊರಗೆ ಬಂದು ಇವರನ್ನು ಪ್ರೋತ್ಸಾಹಿಸಬೇಕು. ಎಂತಹ ಸಮಸ್ಯೆ ಬಂದರೂ ಕುಗ್ಗಬಾರದು. ಸಮಾಜವನ್ನು ಎದುರಿಸಬೇಕು ಎಂದರು.

ಧಾರವಾಡದ ಮನಗುಂಡಿಯ ಗುರು ಬಸವ ಮಹಾಮನೆ ಮಠದ ಬಸವಾನಂದ ಮಹಾ ಸ್ವಾಮೀಜಿ ಆರ್ಶೀವಚನ ನೀಡಿದರು. ಒಂಟಿಕೊಪ್ಪಲು ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ಸಿ.ಚೆಲುವಯ್ಯ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್, ನಿರ್ದೇಶಕ ಗುರುರಾಜ್, ರಾಮು, ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ ಅಧ್ಯಕ್ಷೆ ಎಚ್.ಎಲ್.ಯಮುನಾ, ಮನು ಕೀರ್ತಿ, ಎ.ಆರ್.ರಮೇಶ್, ಶಶಿಧರ್ ಇತರರು ಇದ್ದರು. ಸುಮಾರು ೨೦೦ಕ್ಕೂ ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪೋಟೋ : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್‌ಸಿಎವಿಸಿ ಸಹಯೋಗದಲ್ಲಿ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಮಾತನಾಡಿದರು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago