ಚೆಸ್ ಆಡುತ್ತಿರುವ ಅಂಧ ಸ್ಪರ್ಧಿಗಳು.
ಮೈಸೂರು : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್ಸಿಎವಿಸಿ ಸಹಯೋಗದಲ್ಲಿ ಎರಡು ದಿನಗಳ ಕಾಲ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್ಶಿಪ್ಗೆ ಸೋಮವಾರ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಪುನೀತ್ ರಾಜ್ಕುಮಾರ್ ಅವರ ಪ್ರೇರಣೆಯಿಂದ ಅನೇಕರು ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ. ಹೃದಯವಂತಿಕೆಯಿಂದ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂದರು.
ನನಗೂ ಚದುರಂಗ ಆಟ ಹೆಚ್ಚು ಇಷ್ಟ. ನಾನೂ ಆಡುತ್ತೇನೆ. ಇದು ಶಕ್ತಿಯಿಂದ ಆಡುವ ಆಟವಲ್ಲ. ಯುಕ್ತಿಯಿಂದ ಆಡುವ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಉತ್ತಮವಾಗಿ ಆಟವಾಡಿ ಎಂದು ಶುಭ ಹಾರೈಸಿದರು.
ನಗರ ಪಾಲಿಕೆ ಸದಸ್ಯ ಎಸ್ಬಿಎಂ ಮಂಜು ಮಾತನಾಡಿ, ಇಲ್ಲಿನ ಸ್ಪರ್ಧಿಗಳಿಗೆ ಕಣ್ಣು ಕಾಣದೆ ಇರಬಹುದು. ಮುಖದಲ್ಲಿ ಯಾವಾಗಲೂ ಸಂತೋಷವಿರುತ್ತದೆ. ಆದರೆ, ಕಣ್ಣು ಕಾಣುವ ನಮ್ಮ ಮುಖಗಳಲ್ಲಿ ಆ ಸಂತೋಷ ಕಾಣುವುದಿಲ್ಲ. ಈ ಸಂತೋಷ ಯಾವಾಗಲೂ ಇರಲಿ ಎಂದು ಹಾರೈಸಿದರು.
ಇದೊಂದು ಮಾನವೀಯ ಸ್ಪರ್ಧೆಯಾಗಿದೆ. ಕಣ್ಣಿದ್ದೂ ಕುರುಡಾಗಿರುವ ಅನೇಕರು ಹೊರಗೆ ಬಂದು ಇವರನ್ನು ಪ್ರೋತ್ಸಾಹಿಸಬೇಕು. ಎಂತಹ ಸಮಸ್ಯೆ ಬಂದರೂ ಕುಗ್ಗಬಾರದು. ಸಮಾಜವನ್ನು ಎದುರಿಸಬೇಕು ಎಂದರು.
ಧಾರವಾಡದ ಮನಗುಂಡಿಯ ಗುರು ಬಸವ ಮಹಾಮನೆ ಮಠದ ಬಸವಾನಂದ ಮಹಾ ಸ್ವಾಮೀಜಿ ಆರ್ಶೀವಚನ ನೀಡಿದರು. ಒಂಟಿಕೊಪ್ಪಲು ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ಸಿ.ಚೆಲುವಯ್ಯ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್, ನಿರ್ದೇಶಕ ಗುರುರಾಜ್, ರಾಮು, ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ ಅಧ್ಯಕ್ಷೆ ಎಚ್.ಎಲ್.ಯಮುನಾ, ಮನು ಕೀರ್ತಿ, ಎ.ಆರ್.ರಮೇಶ್, ಶಶಿಧರ್ ಇತರರು ಇದ್ದರು. ಸುಮಾರು ೨೦೦ಕ್ಕೂ ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಪೋಟೋ : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್ಸಿಎವಿಸಿ ಸಹಯೋಗದಲ್ಲಿ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್ಶಿಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಮಾತನಾಡಿದರು.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…