ಜಿಲ್ಲೆಗಳು

ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್ ಎಲ್.ನಾಗೇಂದ್ರ ಚಾಲನೆ…

ಮೈಸೂರು : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್‌ಸಿಎವಿಸಿ ಸಹಯೋಗದಲ್ಲಿ ಎರಡು ದಿನಗಳ ಕಾಲ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಪುನೀತ್ ರಾಜ್‌ಕುಮಾರ್ ಅವರ ಪ್ರೇರಣೆಯಿಂದ ಅನೇಕರು ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ. ಹೃದಯವಂತಿಕೆಯಿಂದ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂದರು.

ನನಗೂ ಚದುರಂಗ ಆಟ ಹೆಚ್ಚು ಇಷ್ಟ. ನಾನೂ ಆಡುತ್ತೇನೆ. ಇದು ಶಕ್ತಿಯಿಂದ ಆಡುವ ಆಟವಲ್ಲ. ಯುಕ್ತಿಯಿಂದ ಆಡುವ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಉತ್ತಮವಾಗಿ ಆಟವಾಡಿ ಎಂದು ಶುಭ ಹಾರೈಸಿದರು.

ನಗರ ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು ಮಾತನಾಡಿ, ಇಲ್ಲಿನ ಸ್ಪರ್ಧಿಗಳಿಗೆ ಕಣ್ಣು ಕಾಣದೆ ಇರಬಹುದು. ಮುಖದಲ್ಲಿ ಯಾವಾಗಲೂ ಸಂತೋಷವಿರುತ್ತದೆ. ಆದರೆ, ಕಣ್ಣು ಕಾಣುವ ನಮ್ಮ ಮುಖಗಳಲ್ಲಿ ಆ ಸಂತೋಷ ಕಾಣುವುದಿಲ್ಲ. ಈ ಸಂತೋಷ ಯಾವಾಗಲೂ ಇರಲಿ ಎಂದು ಹಾರೈಸಿದರು.

ಇದೊಂದು ಮಾನವೀಯ ಸ್ಪರ್ಧೆಯಾಗಿದೆ. ಕಣ್ಣಿದ್ದೂ ಕುರುಡಾಗಿರುವ ಅನೇಕರು ಹೊರಗೆ ಬಂದು ಇವರನ್ನು ಪ್ರೋತ್ಸಾಹಿಸಬೇಕು. ಎಂತಹ ಸಮಸ್ಯೆ ಬಂದರೂ ಕುಗ್ಗಬಾರದು. ಸಮಾಜವನ್ನು ಎದುರಿಸಬೇಕು ಎಂದರು.

ಧಾರವಾಡದ ಮನಗುಂಡಿಯ ಗುರು ಬಸವ ಮಹಾಮನೆ ಮಠದ ಬಸವಾನಂದ ಮಹಾ ಸ್ವಾಮೀಜಿ ಆರ್ಶೀವಚನ ನೀಡಿದರು. ಒಂಟಿಕೊಪ್ಪಲು ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ಸಿ.ಚೆಲುವಯ್ಯ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್, ನಿರ್ದೇಶಕ ಗುರುರಾಜ್, ರಾಮು, ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ ಅಧ್ಯಕ್ಷೆ ಎಚ್.ಎಲ್.ಯಮುನಾ, ಮನು ಕೀರ್ತಿ, ಎ.ಆರ್.ರಮೇಶ್, ಶಶಿಧರ್ ಇತರರು ಇದ್ದರು. ಸುಮಾರು ೨೦೦ಕ್ಕೂ ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪೋಟೋ : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್‌ಸಿಎವಿಸಿ ಸಹಯೋಗದಲ್ಲಿ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಮಾತನಾಡಿದರು.

andolana

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

2 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

15 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

16 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

16 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

16 hours ago