ಜಿಲ್ಲೆಗಳು

ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆ : ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡಕ್ಕೆ ಪ್ರಶಸ್ತಿ

ಮೈಸೂರು: ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಫರ್ಧೆಯಲ್ಲಿ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮೈಸೂರು ಜಿಲ್ಲಾ ಘಟಕ ಹಾಗೂ ಯುವಶಕ್ತಿ ಪಡೆಯ ಜಂಟಿ ಆಶ್ರಯದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದ ಎರಡು ದಿನಗಳ ಎತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಅಂತಿಮ ಹಂತದವರೆಗೂ ಪಟ್ಟುಬಿಡದೇ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಮೂಲಕ ತಮ್ಮ ಮಾಲೀಕರಿಗೆ ಬೆಳ್ಳಿ ಗದೆ ಮತ್ತು ಟ್ರೋಫಿಯನ್ನು ಉಡುಗೊರೆ ನೀಡಿದವು. ಮೈಸೂರು, ಮಂಡ್ಯ, ದಾವಣಗೆರೆ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆಗಳಿಂದ ರೈತರು, ಯುವ ರೈತರು ಎತ್ತಿನಗಾಡಿಯನ್ನು ಗಾಳಿಯ ವೇಗಕ್ಕೆ ತಕ್ಕಂತೆ ಮುನ್ನುಗ್ಗಿಸಿದ ಕೌಶಲ ಎಲ್ಲರನ್ನೂ ನಿಬ್ಬೆರಗಾಗುವಂತೆ ಮಾಡಿತು. ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಸ್ಪರ್ಧೆ ವೀಕ್ಷಿಸಿ ಸಂಭ್ರಮಿಸಿದರು.

ಪ್ರಥಮ ಸ್ಥಾನ ಪಡೆದ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡಕ್ಕೆ ಹಳ್ಳಿಕಾರ್ ಹಸು, ೧.೫ ಕೆ.ಜಿ. ತೂಕದ ಬೆಳ್ಳಿ ಗದೆ ಮತ್ತು ಟ್ರೋಫಿ, ಎರಡನೇ ಸ್ಥಾನಗಳಿಸಿದ ಸಿದ್ದಲಿಂಗಪುರದ ಭೈರವೇಶ್ವರ ಕೃಪೆ ತಂಡಕ್ಕೆ ೧ ಕೆ.ಜಿ. ತೂಕದ ಬೆಳ್ಳಿ ಟ್ರೋಫಿ ಮತ್ತು ಟಗರನ್ನು ನೀಡಲಾಯಿತು. ತೃತೀಯ ಸ್ಥಾನಗಳಿಸಿದ ಪಾಲಹಳ್ಳಿಯ ಶ್ರೀ ಮೈಲಾರಲಿಂಗೇಶ್ವರ ತಂಡಕ್ಕೆ ೫೦೦ ಗ್ರಾಂ ಬೆಳ್ಳಿ ಟ್ರೋಫಿ ಹಾಗೂ ೧ ಕುರಿಯನ್ನು ನೀಡಲಾಯಿತು. ಮಲ್ಲಿಗೆರೆಯ ರೋಲೆಕ್ಸ್ ಸರ್ಜಾ ಕೆ.ಎ.೧೧ ತಂಡಕ್ಕೆ ನಾಲ್ಕನೇ ಬಹುಮಾನವಾಗಿ ೩೦೦ ಗ್ರಾಂ ಬೆಳ್ಳಿ ಹಾಗೂ ೧ ಮೇಕೆ ನೀಡಲಾಯಿತು. ಉತ್ತಮ ರೈಡರ್ಸ್‌ಗಳಾಗಿ ಚಿಕ್ಕಾಡೆ ಮಾಹಿ, ಸೆವೆನ್ ಗೌತು ಪ್ರಶಸ್ತಿ ಪಡೆದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಎತ್ತಿನಗಾಡಿ ಸ್ಪರ್ಧೆ ಪ್ರತಿವರ್ಷ ನಡೆಯುವಂತಾಗಬೇಕು. ಇಂದು ಗ್ರಾಮೀಣ ಕ್ರೀಡೆಗಳು ನಶಿಸುವ ಹಾದಿಯಲ್ಲಿವೆ, ನಮ್ಮ ನೆಲದ ಕ್ರೀಡೆಯನ್ನು ನಾವು ಬೆಳೆಸಬೇಕು. ಅವುಗಳ ಉಳಿವಿಗಾಗಿ ಇಂತಹ ಆಯೋಜನೆಗಳು ನಡೆಯುತ್ತಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್, ಯುವಶಕ್ತಿ ಪಡೆ ಅಧ್ಯಕ್ಷ ಕಾರ್ತಿಕ್, ಮಾಜಿ ಗ್ರಾಂಪಂ ಅಧ್ಯಕ್ಷ ಎಸ್.ವಿಜಯಕುಮಾರ್, ಗ್ರಾಪಂ ಸದಸ್ಯ ಶಿವು, ಯುವ ರೈತ ದಿವಾಕರ್, ಮೋಹನ್ ಕುಮಾರ್(ಬಾಬು) ಭಾಗವಹಿಸಿದ್ದರು.

ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮೈಸೂರು ಜಿಲ್ಲಾ ಘಟಕ ಹಾಗೂ ಯುವಶಕ್ತಿ ಪಡೆಯ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆಯ ರೋಚಕ ದೃಶ್ಯ ನೋಡುಗರ ಮೈನವಿರೇಳಿಸಿತು.

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

9 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

9 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

10 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

10 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

10 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

10 hours ago