ಮೈಸೂರು: ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಫರ್ಧೆಯಲ್ಲಿ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಎತ್ತಿನಗಾಡಿ ಸ್ಪರ್ಧೆ ಪ್ರತಿವರ್ಷ ನಡೆಯುವಂತಾಗಬೇಕು. ಇಂದು ಗ್ರಾಮೀಣ ಕ್ರೀಡೆಗಳು ನಶಿಸುವ ಹಾದಿಯಲ್ಲಿವೆ, ನಮ್ಮ ನೆಲದ ಕ್ರೀಡೆಯನ್ನು ನಾವು ಬೆಳೆಸಬೇಕು. ಅವುಗಳ ಉಳಿವಿಗಾಗಿ ಇಂತಹ ಆಯೋಜನೆಗಳು ನಡೆಯುತ್ತಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್, ಯುವಶಕ್ತಿ ಪಡೆ ಅಧ್ಯಕ್ಷ ಕಾರ್ತಿಕ್, ಮಾಜಿ ಗ್ರಾಂಪಂ ಅಧ್ಯಕ್ಷ ಎಸ್.ವಿಜಯಕುಮಾರ್, ಗ್ರಾಪಂ ಸದಸ್ಯ ಶಿವು, ಯುವ ರೈತ ದಿವಾಕರ್, ಮೋಹನ್ ಕುಮಾರ್(ಬಾಬು) ಭಾಗವಹಿಸಿದ್ದರು.
ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮೈಸೂರು ಜಿಲ್ಲಾ ಘಟಕ ಹಾಗೂ ಯುವಶಕ್ತಿ ಪಡೆಯ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆಯ ರೋಚಕ ದೃಶ್ಯ ನೋಡುಗರ ಮೈನವಿರೇಳಿಸಿತು.
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…