ಮೈಸೂರು: ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಫರ್ಧೆಯಲ್ಲಿ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಎತ್ತಿನಗಾಡಿ ಸ್ಪರ್ಧೆ ಪ್ರತಿವರ್ಷ ನಡೆಯುವಂತಾಗಬೇಕು. ಇಂದು ಗ್ರಾಮೀಣ ಕ್ರೀಡೆಗಳು ನಶಿಸುವ ಹಾದಿಯಲ್ಲಿವೆ, ನಮ್ಮ ನೆಲದ ಕ್ರೀಡೆಯನ್ನು ನಾವು ಬೆಳೆಸಬೇಕು. ಅವುಗಳ ಉಳಿವಿಗಾಗಿ ಇಂತಹ ಆಯೋಜನೆಗಳು ನಡೆಯುತ್ತಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್, ಯುವಶಕ್ತಿ ಪಡೆ ಅಧ್ಯಕ್ಷ ಕಾರ್ತಿಕ್, ಮಾಜಿ ಗ್ರಾಂಪಂ ಅಧ್ಯಕ್ಷ ಎಸ್.ವಿಜಯಕುಮಾರ್, ಗ್ರಾಪಂ ಸದಸ್ಯ ಶಿವು, ಯುವ ರೈತ ದಿವಾಕರ್, ಮೋಹನ್ ಕುಮಾರ್(ಬಾಬು) ಭಾಗವಹಿಸಿದ್ದರು.
ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮೈಸೂರು ಜಿಲ್ಲಾ ಘಟಕ ಹಾಗೂ ಯುವಶಕ್ತಿ ಪಡೆಯ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆಯ ರೋಚಕ ದೃಶ್ಯ ನೋಡುಗರ ಮೈನವಿರೇಳಿಸಿತು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…