ಜಿಲ್ಲೆಗಳು

23ಕ್ಕೆ ರಾಜ್ಯ ಮಟ್ಟದ ರಾಣಿ ಚೆನ್ನಮ್ಮ ಜಯಂತ್ಯುತ್ಸವ

ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು.
ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಬಾರಿ ರಾಜ್ಯ ಮಟ್ಟದ ಚೆನ್ನಮ್ಮ ಜಯಂತಿ ಆಚರಿಸುತ್ತಿದೆ. ನಮ್ಮ ಒತ್ತಾಯದಿಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಟಿಪ್ಪು ಸುಲ್ತಾನ್‌ರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ದಿಟ್ಟತನದಿಂದ ಹೋರಾಡಿದ ಚೆನ್ನಮ್ಮ ಅವರ ಜಯಂತಿಯನ್ನು ಮಾತ್ರ ಕಿತ್ತೂರಿಗೆ ಸೀಮಿತ ಮಾಡಲಾಗಿತ್ತು ಎಂದರು.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲಕುಮಾರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಚೆನ್ನಮ್ಮ ಭಾವಚಿತ್ರವನ್ನು ಶ್ರೀ ಚಾಮರಾಜೇಶ್ವರ ದೇವಾಲಯದಿಂದ ಕಲಾಮಂದಿರದ ತನಕ ಮೆರವಣಿಗೆ ಮಾಡಲಾಗುವುದು. ಕೂಡಲ ಸಂಗಮದ ಶ್ರೀ ಪಂಚಮಸಾಲಿ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ, ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, ನಗರದ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ವಿವರಿಸಿದರು.

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

25 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago