ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು.
ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಬಾರಿ ರಾಜ್ಯ ಮಟ್ಟದ ಚೆನ್ನಮ್ಮ ಜಯಂತಿ ಆಚರಿಸುತ್ತಿದೆ. ನಮ್ಮ ಒತ್ತಾಯದಿಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಟಿಪ್ಪು ಸುಲ್ತಾನ್ರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ದಿಟ್ಟತನದಿಂದ ಹೋರಾಡಿದ ಚೆನ್ನಮ್ಮ ಅವರ ಜಯಂತಿಯನ್ನು ಮಾತ್ರ ಕಿತ್ತೂರಿಗೆ ಸೀಮಿತ ಮಾಡಲಾಗಿತ್ತು ಎಂದರು.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲಕುಮಾರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಚೆನ್ನಮ್ಮ ಭಾವಚಿತ್ರವನ್ನು ಶ್ರೀ ಚಾಮರಾಜೇಶ್ವರ ದೇವಾಲಯದಿಂದ ಕಲಾಮಂದಿರದ ತನಕ ಮೆರವಣಿಗೆ ಮಾಡಲಾಗುವುದು. ಕೂಡಲ ಸಂಗಮದ ಶ್ರೀ ಪಂಚಮಸಾಲಿ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ, ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, ನಗರದ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ವಿವರಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…