ಜಿಲ್ಲೆಗಳು

23ಕ್ಕೆ ರಾಜ್ಯ ಮಟ್ಟದ ರಾಣಿ ಚೆನ್ನಮ್ಮ ಜಯಂತ್ಯುತ್ಸವ

ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು.
ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಬಾರಿ ರಾಜ್ಯ ಮಟ್ಟದ ಚೆನ್ನಮ್ಮ ಜಯಂತಿ ಆಚರಿಸುತ್ತಿದೆ. ನಮ್ಮ ಒತ್ತಾಯದಿಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಟಿಪ್ಪು ಸುಲ್ತಾನ್‌ರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ದಿಟ್ಟತನದಿಂದ ಹೋರಾಡಿದ ಚೆನ್ನಮ್ಮ ಅವರ ಜಯಂತಿಯನ್ನು ಮಾತ್ರ ಕಿತ್ತೂರಿಗೆ ಸೀಮಿತ ಮಾಡಲಾಗಿತ್ತು ಎಂದರು.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲಕುಮಾರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಚೆನ್ನಮ್ಮ ಭಾವಚಿತ್ರವನ್ನು ಶ್ರೀ ಚಾಮರಾಜೇಶ್ವರ ದೇವಾಲಯದಿಂದ ಕಲಾಮಂದಿರದ ತನಕ ಮೆರವಣಿಗೆ ಮಾಡಲಾಗುವುದು. ಕೂಡಲ ಸಂಗಮದ ಶ್ರೀ ಪಂಚಮಸಾಲಿ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ, ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, ನಗರದ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ವಿವರಿಸಿದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

27 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago