ಜಿಲ್ಲೆಗಳು

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು :ಡಿವೈಎಸ್‌ಪಿ ಟಿ.ಪಿ.ಶಿವಕುಮಾರ್ ಕಿವಿಮಾತು

ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಗುರಿ ಹೊಂದುವ ಮೂಲಕ ಪ್ರತಿ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬೇಕು. ಸಿವಿಲ್ ಸೇವೆ, ಸೇನೆ ಸೇರಿದಂತೆ ಇತರೆ ಹಲವು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ವಿಫುಲವಾದ ಅವಕಾಶಗಳಿವೆ. ಅಲ್ಲದೇ ವಿಶೇಷವಾದ ಮೀಸಲಾತಿ ಸಹ ಇದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ರೀತಿಯ ಪರೀಕ್ಷೆಗಳನ್ನು ಎದುರಿಸಿ ಜೀವನ ರೂಪಿಸಿಕೊಳ್ಳಬೇಕು. ಶಾಲಾ, ಕಾಲೇಜುಗಳಲ್ಲಿರುವ ಸಾಂಸ್ಕೃತಿಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕಲಿಕೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಉದ್ಯೋಗದಲ್ಲಿ ವೃತ್ತಿ ನೈಪುಣ್ಯತೆ ಮೆರೆದರೆ ಹುದ್ದೆಯ ಘನತೆ ಹೆಚ್ಚಿಸುತ್ತದೆ. ಸಮಾಜದಲ್ಲಿ ಮಹಿಳೆಯರು ಸಬಲರಾಗಲು ಶಿಕ್ಷಣ ಬಹಳ ಮುಖ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸೇವೆ ದೊರಕಬೇಕು. ಮಹಿಳೆಯರ ಸೇವೆ ದೇಶಕ್ಕೆ ಅವಶ್ಯಕ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಕಾಲೇಜಿಗೆ ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಬಿ.ಎಲ್.ತ್ರಿಪುರಾಂಕ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಸಿದ್ದರಾಜು, ಉಪನ್ಯಾಸಕರಾದ ರೇವಣಾಂಬ, ಡಾ.ಎ.ಆರ್.ಸುಷ್ಮಾ ಸೇರಿದಂತೆ ಇತರರಿದ್ದರು.

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

3 hours ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

3 hours ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

3 hours ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

3 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

3 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

3 hours ago