ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಗುರಿ ಹೊಂದುವ ಮೂಲಕ ಪ್ರತಿ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬೇಕು. ಸಿವಿಲ್ ಸೇವೆ, ಸೇನೆ ಸೇರಿದಂತೆ ಇತರೆ ಹಲವು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ವಿಫುಲವಾದ ಅವಕಾಶಗಳಿವೆ. ಅಲ್ಲದೇ ವಿಶೇಷವಾದ ಮೀಸಲಾತಿ ಸಹ ಇದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ರೀತಿಯ ಪರೀಕ್ಷೆಗಳನ್ನು ಎದುರಿಸಿ ಜೀವನ ರೂಪಿಸಿಕೊಳ್ಳಬೇಕು. ಶಾಲಾ, ಕಾಲೇಜುಗಳಲ್ಲಿರುವ ಸಾಂಸ್ಕೃತಿಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕಲಿಕೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಉದ್ಯೋಗದಲ್ಲಿ ವೃತ್ತಿ ನೈಪುಣ್ಯತೆ ಮೆರೆದರೆ ಹುದ್ದೆಯ ಘನತೆ ಹೆಚ್ಚಿಸುತ್ತದೆ. ಸಮಾಜದಲ್ಲಿ ಮಹಿಳೆಯರು ಸಬಲರಾಗಲು ಶಿಕ್ಷಣ ಬಹಳ ಮುಖ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸೇವೆ ದೊರಕಬೇಕು. ಮಹಿಳೆಯರ ಸೇವೆ ದೇಶಕ್ಕೆ ಅವಶ್ಯಕ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಕಾಲೇಜಿಗೆ ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಜೆಎಸ್ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಬಿ.ಎಲ್.ತ್ರಿಪುರಾಂಕ, ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಸಿದ್ದರಾಜು, ಉಪನ್ಯಾಸಕರಾದ ರೇವಣಾಂಬ, ಡಾ.ಎ.ಆರ್.ಸುಷ್ಮಾ ಸೇರಿದಂತೆ ಇತರರಿದ್ದರು.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…