ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಗುರಿ ಹೊಂದುವ ಮೂಲಕ ಪ್ರತಿ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬೇಕು. ಸಿವಿಲ್ ಸೇವೆ, ಸೇನೆ ಸೇರಿದಂತೆ ಇತರೆ ಹಲವು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ವಿಫುಲವಾದ ಅವಕಾಶಗಳಿವೆ. ಅಲ್ಲದೇ ವಿಶೇಷವಾದ ಮೀಸಲಾತಿ ಸಹ ಇದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ರೀತಿಯ ಪರೀಕ್ಷೆಗಳನ್ನು ಎದುರಿಸಿ ಜೀವನ ರೂಪಿಸಿಕೊಳ್ಳಬೇಕು. ಶಾಲಾ, ಕಾಲೇಜುಗಳಲ್ಲಿರುವ ಸಾಂಸ್ಕೃತಿಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕಲಿಕೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಉದ್ಯೋಗದಲ್ಲಿ ವೃತ್ತಿ ನೈಪುಣ್ಯತೆ ಮೆರೆದರೆ ಹುದ್ದೆಯ ಘನತೆ ಹೆಚ್ಚಿಸುತ್ತದೆ. ಸಮಾಜದಲ್ಲಿ ಮಹಿಳೆಯರು ಸಬಲರಾಗಲು ಶಿಕ್ಷಣ ಬಹಳ ಮುಖ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸೇವೆ ದೊರಕಬೇಕು. ಮಹಿಳೆಯರ ಸೇವೆ ದೇಶಕ್ಕೆ ಅವಶ್ಯಕ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಕಾಲೇಜಿಗೆ ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಜೆಎಸ್ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಬಿ.ಎಲ್.ತ್ರಿಪುರಾಂಕ, ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಸಿದ್ದರಾಜು, ಉಪನ್ಯಾಸಕರಾದ ರೇವಣಾಂಬ, ಡಾ.ಎ.ಆರ್.ಸುಷ್ಮಾ ಸೇರಿದಂತೆ ಇತರರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…