ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು.
ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ಇಡೀ ಜಗತ್ತನ್ನೇ ದೇಶದತ್ತ ಸೆಳೆಯಲು ಕಾರಣರಾದ ಆಧ್ಯಾತ್ಮ ಚೇತನ. ಇವರು ಯುವಕರಲ್ಲಿ ದೇಶ ಪ್ರೇಮವನ್ನು ಮೂಢಿಸುವುದರ ಮೂಲಕ ಸದೃಢ ರಾಷ್ಟ ನಿರ್ಮಿಸಲು ಪಣತೊಟ್ಟ ಅಪ್ಪಟ ದೇಶಪ್ರೇಮಿ. ಜತೆಗೆ ಉತ್ತಮ ಸಮಾಜ ನಿರ್ಮಿಸಲು ಕನಸನ್ನು ಹೊತ್ತು ದೇಶದ ಜನರಿಗೆ ಕರೆ ನೀಡಿದ್ದ ಆಧ್ಯಾತ್ಮಕ ಚಿಂತಕ. ಇವರು ದೇಶದ ಸಂಸ್ಕøತಿಯನ್ನು ಉತ್ತುಂಗಕ್ಕೇರಿಸುವುದರ ಮೂಲಕ ಜನರಲ್ಲಿ ಭಾವಕ್ಯತೆಯ ಬೇರಿಗೆ ಭದ್ರ ಬುನಾದಿ ಹಾಕಿದವರು. ಇವರು ಚಿಕ್ಕ ವಯಸ್ಸಿನಲ್ಲಿಯೇ ದೇಶದಲ್ಲಿನ ಸವಾಲುಗಳನ್ನು ಎದುರಿಸಿ ಉತ್ತಮ ದೇಶ ನಿರ್ಮಾಣ ಮಾಡಲು ಪಣ ತೊಟ್ಟವರು. ಹಾಗಾಗಿ ದೇಶಕ್ಕೆ ತಮ್ಮದೇಯಾದ ಸೇವೆಯನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜೆ.ಎಂ ರಾಣಿ, ಶಿಕ್ಷಕರಾದ ಏಜಾಜ್ ಅಹಮದ್, ದೇವರಾಜು, ಕೆಂಚಪ್ಪ, ರೂಪಶ್ರೀ, ಸಾವಿತ್ರಿ, ದೇವಾಂಗಿನಿ, ಸುನೀತ, ಕವಿತ, ರಾಜಮ್ಮ ಇದ್ದರು.
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…