ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು.
ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ಇಡೀ ಜಗತ್ತನ್ನೇ ದೇಶದತ್ತ ಸೆಳೆಯಲು ಕಾರಣರಾದ ಆಧ್ಯಾತ್ಮ ಚೇತನ. ಇವರು ಯುವಕರಲ್ಲಿ ದೇಶ ಪ್ರೇಮವನ್ನು ಮೂಢಿಸುವುದರ ಮೂಲಕ ಸದೃಢ ರಾಷ್ಟ ನಿರ್ಮಿಸಲು ಪಣತೊಟ್ಟ ಅಪ್ಪಟ ದೇಶಪ್ರೇಮಿ. ಜತೆಗೆ ಉತ್ತಮ ಸಮಾಜ ನಿರ್ಮಿಸಲು ಕನಸನ್ನು ಹೊತ್ತು ದೇಶದ ಜನರಿಗೆ ಕರೆ ನೀಡಿದ್ದ ಆಧ್ಯಾತ್ಮಕ ಚಿಂತಕ. ಇವರು ದೇಶದ ಸಂಸ್ಕøತಿಯನ್ನು ಉತ್ತುಂಗಕ್ಕೇರಿಸುವುದರ ಮೂಲಕ ಜನರಲ್ಲಿ ಭಾವಕ್ಯತೆಯ ಬೇರಿಗೆ ಭದ್ರ ಬುನಾದಿ ಹಾಕಿದವರು. ಇವರು ಚಿಕ್ಕ ವಯಸ್ಸಿನಲ್ಲಿಯೇ ದೇಶದಲ್ಲಿನ ಸವಾಲುಗಳನ್ನು ಎದುರಿಸಿ ಉತ್ತಮ ದೇಶ ನಿರ್ಮಾಣ ಮಾಡಲು ಪಣ ತೊಟ್ಟವರು. ಹಾಗಾಗಿ ದೇಶಕ್ಕೆ ತಮ್ಮದೇಯಾದ ಸೇವೆಯನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜೆ.ಎಂ ರಾಣಿ, ಶಿಕ್ಷಕರಾದ ಏಜಾಜ್ ಅಹಮದ್, ದೇವರಾಜು, ಕೆಂಚಪ್ಪ, ರೂಪಶ್ರೀ, ಸಾವಿತ್ರಿ, ದೇವಾಂಗಿನಿ, ಸುನೀತ, ಕವಿತ, ರಾಜಮ್ಮ ಇದ್ದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.…
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…