ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು.
ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ಇಡೀ ಜಗತ್ತನ್ನೇ ದೇಶದತ್ತ ಸೆಳೆಯಲು ಕಾರಣರಾದ ಆಧ್ಯಾತ್ಮ ಚೇತನ. ಇವರು ಯುವಕರಲ್ಲಿ ದೇಶ ಪ್ರೇಮವನ್ನು ಮೂಢಿಸುವುದರ ಮೂಲಕ ಸದೃಢ ರಾಷ್ಟ ನಿರ್ಮಿಸಲು ಪಣತೊಟ್ಟ ಅಪ್ಪಟ ದೇಶಪ್ರೇಮಿ. ಜತೆಗೆ ಉತ್ತಮ ಸಮಾಜ ನಿರ್ಮಿಸಲು ಕನಸನ್ನು ಹೊತ್ತು ದೇಶದ ಜನರಿಗೆ ಕರೆ ನೀಡಿದ್ದ ಆಧ್ಯಾತ್ಮಕ ಚಿಂತಕ. ಇವರು ದೇಶದ ಸಂಸ್ಕøತಿಯನ್ನು ಉತ್ತುಂಗಕ್ಕೇರಿಸುವುದರ ಮೂಲಕ ಜನರಲ್ಲಿ ಭಾವಕ್ಯತೆಯ ಬೇರಿಗೆ ಭದ್ರ ಬುನಾದಿ ಹಾಕಿದವರು. ಇವರು ಚಿಕ್ಕ ವಯಸ್ಸಿನಲ್ಲಿಯೇ ದೇಶದಲ್ಲಿನ ಸವಾಲುಗಳನ್ನು ಎದುರಿಸಿ ಉತ್ತಮ ದೇಶ ನಿರ್ಮಾಣ ಮಾಡಲು ಪಣ ತೊಟ್ಟವರು. ಹಾಗಾಗಿ ದೇಶಕ್ಕೆ ತಮ್ಮದೇಯಾದ ಸೇವೆಯನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜೆ.ಎಂ ರಾಣಿ, ಶಿಕ್ಷಕರಾದ ಏಜಾಜ್ ಅಹಮದ್, ದೇವರಾಜು, ಕೆಂಚಪ್ಪ, ರೂಪಶ್ರೀ, ಸಾವಿತ್ರಿ, ದೇವಾಂಗಿನಿ, ಸುನೀತ, ಕವಿತ, ರಾಜಮ್ಮ ಇದ್ದರು.
ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…
ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…
ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…
ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ…
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್ನ ಘಟನೆ…