ಹನೂರು: ಪ್ರತಿಯೊಬ್ಬರೂ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು ಎಂದು ಶಿಕ್ಷಕ ರಮೇಶ್ ತಿಳಿಸಿದರು.
ತಾಲೂಕಿನ ರಾಮಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ಇಡೀ ಜಗತ್ತನ್ನೇ ದೇಶದತ್ತ ಸೆಳೆಯಲು ಕಾರಣರಾದ ಆಧ್ಯಾತ್ಮ ಚೇತನ. ಇವರು ಯುವಕರಲ್ಲಿ ದೇಶ ಪ್ರೇಮವನ್ನು ಮೂಢಿಸುವುದರ ಮೂಲಕ ಸದೃಢ ರಾಷ್ಟ ನಿರ್ಮಿಸಲು ಪಣತೊಟ್ಟ ಅಪ್ಪಟ ದೇಶಪ್ರೇಮಿ. ಜತೆಗೆ ಉತ್ತಮ ಸಮಾಜ ನಿರ್ಮಿಸಲು ಕನಸನ್ನು ಹೊತ್ತು ದೇಶದ ಜನರಿಗೆ ಕರೆ ನೀಡಿದ್ದ ಆಧ್ಯಾತ್ಮಕ ಚಿಂತಕ. ಇವರು ದೇಶದ ಸಂಸ್ಕøತಿಯನ್ನು ಉತ್ತುಂಗಕ್ಕೇರಿಸುವುದರ ಮೂಲಕ ಜನರಲ್ಲಿ ಭಾವಕ್ಯತೆಯ ಬೇರಿಗೆ ಭದ್ರ ಬುನಾದಿ ಹಾಕಿದವರು. ಇವರು ಚಿಕ್ಕ ವಯಸ್ಸಿನಲ್ಲಿಯೇ ದೇಶದಲ್ಲಿನ ಸವಾಲುಗಳನ್ನು ಎದುರಿಸಿ ಉತ್ತಮ ದೇಶ ನಿರ್ಮಾಣ ಮಾಡಲು ಪಣ ತೊಟ್ಟವರು. ಹಾಗಾಗಿ ದೇಶಕ್ಕೆ ತಮ್ಮದೇಯಾದ ಸೇವೆಯನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜೆ.ಎಂ ರಾಣಿ, ಶಿಕ್ಷಕರಾದ ಏಜಾಜ್ ಅಹಮದ್, ದೇವರಾಜು, ಕೆಂಚಪ್ಪ, ರೂಪಶ್ರೀ, ಸಾವಿತ್ರಿ, ದೇವಾಂಗಿನಿ, ಸುನೀತ, ಕವಿತ, ರಾಜಮ್ಮ ಇದ್ದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…