Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಬಸ್ಸಿಗಾಗಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.

ತಾಲೂಕಿನ ಬೈಲೂರು, ಹುತ್ತೂರು, ಒಡೆಯರಪಾಳ್ಯ,ಪಿ ಜಿ ಪಾಳ್ಯ ಚಿಕ್ಕ ಮಾಲಾಪುರ, ಚನ್ನಲಿಂಗನಹಳ್ಳಿ, ಕಂಡಯ್ಯನ ಪಾಳ್ಯ ಸೇರಿದಂತೆ ಲೋಕನಹಳ್ಳಿ ಗ್ರಾಮದಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳ್ಳೇಗಾಲದ ವಿವಿಧ ಖಾಸಗಿ ಶಾಲೆಗೆ ಪ್ರತಿ ದಿನ ತೆರಳುತ್ತಿದ್ದಾರೆ.

ಬೆಳಗಿನ ಸಮಯದಲ್ಲಿ ಕೇವಲ 2 ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಸ್‌ಗಳಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತೆರಳ ಬೇಕಿದೆ. ಹೆಚ್ಚಿನ ವಿದ್ಯಾರ್ಥಿಗಳು ಕಾಲೇಜಿಗೆ ಹೋಗುತ್ತಿರುವುದರಿಂದ ಎರಡು ಬಸ್ ಗಳು ಸಾಕಾಗುತ್ತಿಲ್ಲ ಹೆಚ್ಚುವರಿ ಬಸ್ ಗಳನ್ನು ಬಿಡುವಂತೆ ಹಲವಾರು ಬಾರಿ ಶಾಲಾ ವಿದ್ಯಾರ್ಥಿಗಳು ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದಾರೆ.ಮನವಿಗೆ ಸ್ಪಂದಿಸದ ಹಿನ್ನೆಲೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ಪೇದೆ, ಬಂಗಾರನಾಯ್ಕ ಸ್ಥಳಕ್ಕಾಗಿಮಿಸಿ ಘಟನೆಯ ಬಗ್ಗೆ ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ವೃತ್ತ ನಿರೀಕ್ಷಕ ಸಂತೋಷ ಕಶ್ಯಪ್ ರವರು ಡಿಪೋ ವ್ಯವಸ್ಥಾಪಕ ಮುತ್ತುರಾಜ್ ರವರಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಈ ವೇಳೆ ಡಿಪೋ ವ್ಯವಸ್ಥಾಪಕ ಮುತ್ತುರಾಜ್ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಜೊತೆ ಚರ್ಚಿಸಿ ನಾಳೆಯಿಂದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟು ಶಾಲಾ-ಕಾಲೇಜಿಗೆ ತೆರಳಿದ್ದಾರೆ. ಈ ವೇಳೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಸಹ ಡಿಪೋ ವ್ಯವಸ್ಥಾಪಕರಿಗೆ ನಾಳೆಯಿಂದ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸುತ್ತೇವೆ, ನಾಳೆಯೂ ಸಮಸ್ಯೆ ಬಗೆಹರಿಯದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!