ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ತಾಲೂಕಿನ ಬೈಲೂರು, ಹುತ್ತೂರು, ಒಡೆಯರಪಾಳ್ಯ,ಪಿ ಜಿ ಪಾಳ್ಯ ಚಿಕ್ಕ ಮಾಲಾಪುರ, ಚನ್ನಲಿಂಗನಹಳ್ಳಿ, ಕಂಡಯ್ಯನ ಪಾಳ್ಯ ಸೇರಿದಂತೆ ಲೋಕನಹಳ್ಳಿ ಗ್ರಾಮದಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳ್ಳೇಗಾಲದ ವಿವಿಧ ಖಾಸಗಿ ಶಾಲೆಗೆ ಪ್ರತಿ ದಿನ ತೆರಳುತ್ತಿದ್ದಾರೆ.
ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ಪೇದೆ, ಬಂಗಾರನಾಯ್ಕ ಸ್ಥಳಕ್ಕಾಗಿಮಿಸಿ ಘಟನೆಯ ಬಗ್ಗೆ ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ವೃತ್ತ ನಿರೀಕ್ಷಕ ಸಂತೋಷ ಕಶ್ಯಪ್ ರವರು ಡಿಪೋ ವ್ಯವಸ್ಥಾಪಕ ಮುತ್ತುರಾಜ್ ರವರಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಈ ವೇಳೆ ಡಿಪೋ ವ್ಯವಸ್ಥಾಪಕ ಮುತ್ತುರಾಜ್ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಜೊತೆ ಚರ್ಚಿಸಿ ನಾಳೆಯಿಂದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟು ಶಾಲಾ-ಕಾಲೇಜಿಗೆ ತೆರಳಿದ್ದಾರೆ. ಈ ವೇಳೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಸಹ ಡಿಪೋ ವ್ಯವಸ್ಥಾಪಕರಿಗೆ ನಾಳೆಯಿಂದ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸುತ್ತೇವೆ, ನಾಳೆಯೂ ಸಮಸ್ಯೆ ಬಗೆಹರಿಯದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…