ಜಿಲ್ಲೆಗಳು

ಬಸ್ಸಿಗಾಗಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.

ತಾಲೂಕಿನ ಬೈಲೂರು, ಹುತ್ತೂರು, ಒಡೆಯರಪಾಳ್ಯ,ಪಿ ಜಿ ಪಾಳ್ಯ ಚಿಕ್ಕ ಮಾಲಾಪುರ, ಚನ್ನಲಿಂಗನಹಳ್ಳಿ, ಕಂಡಯ್ಯನ ಪಾಳ್ಯ ಸೇರಿದಂತೆ ಲೋಕನಹಳ್ಳಿ ಗ್ರಾಮದಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳ್ಳೇಗಾಲದ ವಿವಿಧ ಖಾಸಗಿ ಶಾಲೆಗೆ ಪ್ರತಿ ದಿನ ತೆರಳುತ್ತಿದ್ದಾರೆ.

ಬೆಳಗಿನ ಸಮಯದಲ್ಲಿ ಕೇವಲ 2 ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಸ್‌ಗಳಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತೆರಳ ಬೇಕಿದೆ. ಹೆಚ್ಚಿನ ವಿದ್ಯಾರ್ಥಿಗಳು ಕಾಲೇಜಿಗೆ ಹೋಗುತ್ತಿರುವುದರಿಂದ ಎರಡು ಬಸ್ ಗಳು ಸಾಕಾಗುತ್ತಿಲ್ಲ ಹೆಚ್ಚುವರಿ ಬಸ್ ಗಳನ್ನು ಬಿಡುವಂತೆ ಹಲವಾರು ಬಾರಿ ಶಾಲಾ ವಿದ್ಯಾರ್ಥಿಗಳು ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದಾರೆ.ಮನವಿಗೆ ಸ್ಪಂದಿಸದ ಹಿನ್ನೆಲೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ಪೇದೆ, ಬಂಗಾರನಾಯ್ಕ ಸ್ಥಳಕ್ಕಾಗಿಮಿಸಿ ಘಟನೆಯ ಬಗ್ಗೆ ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ವೃತ್ತ ನಿರೀಕ್ಷಕ ಸಂತೋಷ ಕಶ್ಯಪ್ ರವರು ಡಿಪೋ ವ್ಯವಸ್ಥಾಪಕ ಮುತ್ತುರಾಜ್ ರವರಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಈ ವೇಳೆ ಡಿಪೋ ವ್ಯವಸ್ಥಾಪಕ ಮುತ್ತುರಾಜ್ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಜೊತೆ ಚರ್ಚಿಸಿ ನಾಳೆಯಿಂದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟು ಶಾಲಾ-ಕಾಲೇಜಿಗೆ ತೆರಳಿದ್ದಾರೆ. ಈ ವೇಳೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಸಹ ಡಿಪೋ ವ್ಯವಸ್ಥಾಪಕರಿಗೆ ನಾಳೆಯಿಂದ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸುತ್ತೇವೆ, ನಾಳೆಯೂ ಸಮಸ್ಯೆ ಬಗೆಹರಿಯದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago