ಜಿಲ್ಲೆಗಳು

ವಿದ್ಯಾರ್ಥಿಗಳ ಓದಿಗೆ ಸಹಾಯಹಸ್ತ ನೀಡುವ ಶಿಕ್ಷಕ

ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ
ಪ್ರಸಾದ್ ಲಕ್ಕೂರು
ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು, ಬೋಧನೆ ಜೊತೆ ಇತರೆ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಶಿಕ್ಷಕರು ನಮ್ಮ ನಡುವೆ ಇದ್ದಾರೆ. ಇಂತಹವರ ನಡುವೆ ವಿದ್ಯಾರ್ಥಿಸ್ನೇಹಿಯಾಗಿ ಸವಾಜಮುಖಿ ಕಾರ್ಯಗಳನ್ನು ಕೈಗೊಂಡು ಸಾರ್ಥಕ ಭಾವ ಕಾಣುವಂತಹ ಶಿಕ್ಷಕರು ಸಹ ತೆರೆಮರೆಯಲ್ಲಿದ್ದಾರೆ.

ಇಲ್ಲೊಬ್ಬರು ಬೋಧನೆ, ಕ್ರೀಡಾ ಚಟುವಟಿಕೆಗಳನ್ನು ಹೇಳಿಕೊಡುವ ಜೊತೆಗೆ ಕಳೆದ ೫ ವರ್ಷಗಳಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ದಾನಿಗಳ ಮೂಲಕ ನೆರವು ದೊರಕಿಸುತ್ತ ವಿದ್ಯಾರ್ಥಿಸ್ನೇಹಿ ಗುರುವಾಗಿದ್ದಾರೆ. ಅವರೇ ತಾಲ್ಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾುಂಣ್.
ಈ ದೈಹಿಕ ಶಿಕ್ಷಣ ಶಿಕ್ಷಕರು ಸುವಾರು ೨೩ ವರ್ಷಗಳಿಂದಸಿದ್ದಯ್ಯನಪುರ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಧನ ಸಹಾಯ, ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್, ಮೊಬೈಲ್‌ಗಳನ್ನು ಕೊಡಿಸುತ್ತ ಒಂದಷ್ಟು ಸವಾಜಮುಖಿ ಕೆಲಸಗಳನ್ನು ವಾಡುತ್ತಿದ್ದಾರೆ.

ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರಿನ ವಿಜುಂನಗರದ ವಾರುತಿ ಮೆಡಿಕಲ್‌ನ ಮಹೇಂದ್ರ ಮೂಣತ್ ಅವರ ನೆರವಿನಿಂದ ೧೫ ಸಾವಿರ ನೋಟ್‌ಬುಕ್‌ಗಳನ್ನು ಪಡೆದಿದ್ದಾರೆ. ಅವುಗಳನ್ನು ಸಿದ್ದಯ್ಯನಪುರ, ಉತ್ತವಳ್ಳಿ, ಅಟ್ಟುಗೂಳಿಪುರ, ಬೇವಿನತಾಳಪುರ ಸೇರಿದಂತೆ ತಾಲ್ಲೂಕಿನ ಹಲವಾರು ಶಾಲೆಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದ್ದಾರೆ.


ದಾನಿಗಳಿಂದ ಲ್ಯಾಪ್ ಟಾಪ್ ಕೊಡುಗೆ
ಮುಂದಿನ ದಿನಗಳಲ್ಲಿ ಚಾಮರಾಜನಗರ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ನೋಟ್ ಬುಕ್ ಹಂಚುವ ನಿರೀಕ್ಷೆಯಲ್ಲಿದ್ದಾರೆ. ಜೊತೆಗೆ ಈ ಬಾರಿ ದಾನಿಗಳ ನೆರವಿನಿಂದ ದಿವ್ಯಾ ಎಂಬ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಒಂದು ಲ್ಯಾಪ್‌ಟಾಪ್ ಹಾಗೂ ಸಿದ್ದರಾಜು ಎಂಬ ವಿದ್ಯಾರ್ಥಿ ವಿದ್ಯಾಭ್ಯಾಸಕ್ಕೆ ಒಂದು ಮೊಬೈಲ್ ಹಾಗೂ ಕೆಂಪನಪುರದ ಶೃತಿ ಎಂಬ ವಿದ್ಯಾರ್ಥಿನಿಗೆ ಬಸ್ ಪಾಸ್ ಶುಲ್ಕ ಮತ್ತು ಕಾಲೇಜು ಪ್ರವೇಶಾತಿ ಶುಲ್ಕ ಪಾವತಿಸಲು ೬ ಸಾವಿರ ರೂ. ನೀಡಿದ್ದಾರೆ. ವಿದ್ಯಾರ್ಥಿನಿ ಕಾವ್ಯಳಿಗೆ ೨೨ ಸಾವಿರ ರೂ., ಗಿರಿಜಾಳಿಗೆ ೧೫ ಸಾವಿರ ರೂ. ಹನುಮಂತುಗೆ ೧೧,೫೦೦ ರೂ. ಕಾಲೇಜು ಪ್ರವೇಶಾತಿ ಶುಲ್ಕ ಪಾವತಿಸಿದ್ದಾರೆ. ಸಿದ್ದಯ್ಯನಪುರ ಸರ್ಕಾರಿ ಶಾಲೆಗೆ ೩೦ ಸಾವಿರ ರೂ. ಬೆಲೆಯಲ್ಲಿ ಬಣ್ಣ ಬಳಿಸಿದ್ದಾರೆ.


ವಿದ್ಯಾರ್ಥಿ ಹಾಗೂ ಶಾಲೆ ಸ್ನೇಹಿ ಕೆಲಸಗಳು ಸೇರಿದಂತೆ ಹಲವಾರು ಸವಾಜಮುಖಿ ಕಾರ್ಯಕ್ರಮಗಳನ್ನು ದಾನಿಗಳ ಮುಖಾಂತರ ವಾಡುತ್ತಿದ್ದೇನೆ. ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವರ ಸಹಕಾರದ ಅಗತ್ಯ ಇದೆ ಎಂಬುದನ್ನು ಅರಿತು ಕೆಲಸ ವಾಡುತ್ತಿದ್ದೇನೆ.
– ನಾರಾಯಣ್, ದೈಹಿಕ ಶಿಕ್ಷಣ ಶಿಕ್ಷಕರು.


ಅಂಕನಶೆಟ್ಟಿಪುರದ ನಾನು ಈ ವರ್ಷ ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಪ್ರಥಮ ಪಿುುಂಸಿಗೆ ದಾಖಲಾಗಲು ೨೨ ಸಾವಿರ ರೂ. ಪ್ರವೇಶಾತಿ ಶುಲ್ಕವನ್ನು ಶಿಕ್ಷಕರಾದ ನಾರಾುಂಣ್ ಅವರು ಪಾವತಿಸಿದ್ದಾರೆ. ನನ್ನ ಸಹೋದರ ಅಮಿತ್ ಕೂಡ ಚಾ.ನಗರದ ಪಿಡಬ್ಲೂತ್ಯೃಡಿ ಶಾಲೆಗೆ ೭ನೇ ತರಗತಿಗೆ ದಾಖಲಾಗಲು ನೆರವಾಗಿ ಲೇಖನ ಸಾಮಗ್ರಿ, ಬ್ಯಾಗ್ ಕೊಡಿಸಿದ್ದಾರೆ.
ಕಾವ್ಯ, ಪ್ರಥಮ ಪಿಯು ವಿದ್ಯಾರ್ಥಿನಿ

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

28 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

33 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

43 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago