ಜಿಲ್ಲೆಗಳು

ವಿದ್ಯಾರ್ಥಿಗಳ ಓದಿಗೆ ಸಹಾಯಹಸ್ತ ನೀಡುವ ಶಿಕ್ಷಕ

ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ
ಪ್ರಸಾದ್ ಲಕ್ಕೂರು
ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು, ಬೋಧನೆ ಜೊತೆ ಇತರೆ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಶಿಕ್ಷಕರು ನಮ್ಮ ನಡುವೆ ಇದ್ದಾರೆ. ಇಂತಹವರ ನಡುವೆ ವಿದ್ಯಾರ್ಥಿಸ್ನೇಹಿಯಾಗಿ ಸವಾಜಮುಖಿ ಕಾರ್ಯಗಳನ್ನು ಕೈಗೊಂಡು ಸಾರ್ಥಕ ಭಾವ ಕಾಣುವಂತಹ ಶಿಕ್ಷಕರು ಸಹ ತೆರೆಮರೆಯಲ್ಲಿದ್ದಾರೆ.

ಇಲ್ಲೊಬ್ಬರು ಬೋಧನೆ, ಕ್ರೀಡಾ ಚಟುವಟಿಕೆಗಳನ್ನು ಹೇಳಿಕೊಡುವ ಜೊತೆಗೆ ಕಳೆದ ೫ ವರ್ಷಗಳಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ದಾನಿಗಳ ಮೂಲಕ ನೆರವು ದೊರಕಿಸುತ್ತ ವಿದ್ಯಾರ್ಥಿಸ್ನೇಹಿ ಗುರುವಾಗಿದ್ದಾರೆ. ಅವರೇ ತಾಲ್ಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾುಂಣ್.
ಈ ದೈಹಿಕ ಶಿಕ್ಷಣ ಶಿಕ್ಷಕರು ಸುವಾರು ೨೩ ವರ್ಷಗಳಿಂದಸಿದ್ದಯ್ಯನಪುರ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಧನ ಸಹಾಯ, ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್, ಮೊಬೈಲ್‌ಗಳನ್ನು ಕೊಡಿಸುತ್ತ ಒಂದಷ್ಟು ಸವಾಜಮುಖಿ ಕೆಲಸಗಳನ್ನು ವಾಡುತ್ತಿದ್ದಾರೆ.

ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರಿನ ವಿಜುಂನಗರದ ವಾರುತಿ ಮೆಡಿಕಲ್‌ನ ಮಹೇಂದ್ರ ಮೂಣತ್ ಅವರ ನೆರವಿನಿಂದ ೧೫ ಸಾವಿರ ನೋಟ್‌ಬುಕ್‌ಗಳನ್ನು ಪಡೆದಿದ್ದಾರೆ. ಅವುಗಳನ್ನು ಸಿದ್ದಯ್ಯನಪುರ, ಉತ್ತವಳ್ಳಿ, ಅಟ್ಟುಗೂಳಿಪುರ, ಬೇವಿನತಾಳಪುರ ಸೇರಿದಂತೆ ತಾಲ್ಲೂಕಿನ ಹಲವಾರು ಶಾಲೆಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದ್ದಾರೆ.


ದಾನಿಗಳಿಂದ ಲ್ಯಾಪ್ ಟಾಪ್ ಕೊಡುಗೆ
ಮುಂದಿನ ದಿನಗಳಲ್ಲಿ ಚಾಮರಾಜನಗರ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ನೋಟ್ ಬುಕ್ ಹಂಚುವ ನಿರೀಕ್ಷೆಯಲ್ಲಿದ್ದಾರೆ. ಜೊತೆಗೆ ಈ ಬಾರಿ ದಾನಿಗಳ ನೆರವಿನಿಂದ ದಿವ್ಯಾ ಎಂಬ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಒಂದು ಲ್ಯಾಪ್‌ಟಾಪ್ ಹಾಗೂ ಸಿದ್ದರಾಜು ಎಂಬ ವಿದ್ಯಾರ್ಥಿ ವಿದ್ಯಾಭ್ಯಾಸಕ್ಕೆ ಒಂದು ಮೊಬೈಲ್ ಹಾಗೂ ಕೆಂಪನಪುರದ ಶೃತಿ ಎಂಬ ವಿದ್ಯಾರ್ಥಿನಿಗೆ ಬಸ್ ಪಾಸ್ ಶುಲ್ಕ ಮತ್ತು ಕಾಲೇಜು ಪ್ರವೇಶಾತಿ ಶುಲ್ಕ ಪಾವತಿಸಲು ೬ ಸಾವಿರ ರೂ. ನೀಡಿದ್ದಾರೆ. ವಿದ್ಯಾರ್ಥಿನಿ ಕಾವ್ಯಳಿಗೆ ೨೨ ಸಾವಿರ ರೂ., ಗಿರಿಜಾಳಿಗೆ ೧೫ ಸಾವಿರ ರೂ. ಹನುಮಂತುಗೆ ೧೧,೫೦೦ ರೂ. ಕಾಲೇಜು ಪ್ರವೇಶಾತಿ ಶುಲ್ಕ ಪಾವತಿಸಿದ್ದಾರೆ. ಸಿದ್ದಯ್ಯನಪುರ ಸರ್ಕಾರಿ ಶಾಲೆಗೆ ೩೦ ಸಾವಿರ ರೂ. ಬೆಲೆಯಲ್ಲಿ ಬಣ್ಣ ಬಳಿಸಿದ್ದಾರೆ.


ವಿದ್ಯಾರ್ಥಿ ಹಾಗೂ ಶಾಲೆ ಸ್ನೇಹಿ ಕೆಲಸಗಳು ಸೇರಿದಂತೆ ಹಲವಾರು ಸವಾಜಮುಖಿ ಕಾರ್ಯಕ್ರಮಗಳನ್ನು ದಾನಿಗಳ ಮುಖಾಂತರ ವಾಡುತ್ತಿದ್ದೇನೆ. ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ವರ ಸಹಕಾರದ ಅಗತ್ಯ ಇದೆ ಎಂಬುದನ್ನು ಅರಿತು ಕೆಲಸ ವಾಡುತ್ತಿದ್ದೇನೆ.
– ನಾರಾಯಣ್, ದೈಹಿಕ ಶಿಕ್ಷಣ ಶಿಕ್ಷಕರು.


ಅಂಕನಶೆಟ್ಟಿಪುರದ ನಾನು ಈ ವರ್ಷ ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಪ್ರಥಮ ಪಿುುಂಸಿಗೆ ದಾಖಲಾಗಲು ೨೨ ಸಾವಿರ ರೂ. ಪ್ರವೇಶಾತಿ ಶುಲ್ಕವನ್ನು ಶಿಕ್ಷಕರಾದ ನಾರಾುಂಣ್ ಅವರು ಪಾವತಿಸಿದ್ದಾರೆ. ನನ್ನ ಸಹೋದರ ಅಮಿತ್ ಕೂಡ ಚಾ.ನಗರದ ಪಿಡಬ್ಲೂತ್ಯೃಡಿ ಶಾಲೆಗೆ ೭ನೇ ತರಗತಿಗೆ ದಾಖಲಾಗಲು ನೆರವಾಗಿ ಲೇಖನ ಸಾಮಗ್ರಿ, ಬ್ಯಾಗ್ ಕೊಡಿಸಿದ್ದಾರೆ.
ಕಾವ್ಯ, ಪ್ರಥಮ ಪಿಯು ವಿದ್ಯಾರ್ಥಿನಿ

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago