ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಾಂಶುಪಾಲರಾದ ಡಾ.ಡಿ ರವಿ ಅವರು ಮಾತನಾಡುತ್ತಿರುವುದು
ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು.
ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು.
ಆತಂಕ ದೂರ ಮಾಡುವ ಸಲುವಾಗಿ ಸಭೆ ಕರೆಯಲಾಗಿತ್ತು.
ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದ ಅವರು
ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಧ್ಯಾಪಕರು, ಕಛೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…
ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಕೇಂದ್ರ…
ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ…
ಹಾಸನ: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ…
ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.…
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ…