ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಾಂಶುಪಾಲರಾದ ಡಾ.ಡಿ ರವಿ ಅವರು ಮಾತನಾಡುತ್ತಿರುವುದು
ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು.
ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು.
ಆತಂಕ ದೂರ ಮಾಡುವ ಸಲುವಾಗಿ ಸಭೆ ಕರೆಯಲಾಗಿತ್ತು.
ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದ ಅವರು
ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಧ್ಯಾಪಕರು, ಕಛೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…